ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

ಬಾಗಲಕೋಟೆ/ ಹುನಗುಂದ: ಪಟ್ಟಣಕ್ಕೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಭೇಟಿ ನೀಡಿದರು. ಸಾಹಿತ್ಯ ಹಾಗೂ ಶಿಕ್ಷಕ ಸಂಘಟನೆಯ ಪ್ರಮುಖರು ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶೀಘ್ರದಲ್ಲೇ ವಿಜಯಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದರು.
ಹಿರಿಯ ಮಕ್ಕಳ ಸಾಹಿತಿ ಸಿಂದಗಿಯ ಹ. ಮ. ಪೂಜಾರ ಹಾಗೂ ಇತರ ಸಾಹಿತಿಗಳೊಂದಿಗೆ ಈಗಾಗಲೇ ಒಂದು ಹಂತದ ಚರ್ಚೆ ಮುಕ್ತಾಯಗೊಂಡಿದ್ದು, ಬಾಲ ವಿಕಾಸ ಅಕಾಡೆಮಿ ಹಾಗೂ ಇತರ ಸಂಘಟನೆಗಳ ಸಹಕಾರದಿಂದ ದೊಡ್ಡ ಪ್ರಮಾಣದಲ್ಲಿ ಸಮ್ಮೇಳನ ನಡೆಸಲಾಗುವುದು, ಈ
ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು, ಪುಸ್ತಕ ಬಿಡುಗಡೆ, ಸಾಧಕ ಮಕ್ಕಳು ಹಾಗೂ ಶಿಕ್ಷಕರಿಗೆ ಗೌರವ ಸಮರ್ಪಣೆ, ಉಪನ್ಯಾಸ, ಸಂವಾದ ಗೋಷ್ಠಿಗಳು ನಡೆಯಲಿವೆ ಎಂದರು.
ಮಕ್ಕಳ ಸರ್ವತೋಮುಖ ಅಭಿವೃದ್ಧಿಯ ಗುರಿಯೊಂದಿಗೆ ಬಾಲ ವಿಕಾಸ ಅಕಾಡೆಮಿ ಕಾರ್ಯೋನ್ಮುಖವಾಗಿದೆ. ಆ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ನಾಡಿಗೆ ಪರಿಚಯಿಸಲು ಅಕಾಡೆಮಿಯು ಸ್ಟುಡಿಯೋವೊಂದನ್ನು ನಿರ್ಮಿಸುತ್ತಿದೆ. ಅಲ್ಲಿ ಮಕ್ಕಳ ಸಾಧನೆಯನ್ನು ಬಿಂಬಿಸುವ ನೃತ್ಯ, ಗಾಯನ, ಸಂಗೀತ, ಕ್ರೀಡೆ, ಸಾಹಸ ಮೊದಲಾದ ಚಟುವಟಿಕೆಗಳು ಹಾಗೂ ಹಿರಿಯ ವಿಜ್ಞಾನಿಗಳು, ಸಾಧಕರು, ವಿದ್ವಾಂಸರ ಚರ್ಚೆ, ಸಂವಾದ, ಭಾಷಣ, ಅಭಿಪ್ರಾಯಗಳನ್ನು ಪ್ರಸಾರ ಮಾಡುವ ಮೂಲಕ ಮಕ್ಕಳ ಜ್ಞಾನ ವಿಕಾಸಕ್ಕೆ ವೇದಿಕೆ ನಿರ್ಮಿಸಲಾಗುವುದು ಎಂದರು.
ಸರಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಕುರಿತು ಶಿಕ್ಷಕರೊಂದಿಗೆ ಸಂವಾದಿಸಿದ ಸಂಗಮೇಶ ಬಬಲೇಶ್ವರ, ಶಾಲಾ ಶಿಕ್ಷಣ ಇಲಾಖೆ ಟ.ಇ.ಟಿ ಮತ್ತು ಸಿ.ಇ.ಟಿಯ ಮೂಲಕ ಪ್ರತಿಭಾವಂತ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿದೆ. ಅವರನ್ನು ಬೋಧನೆಯ ಜೊತೆಗೆ ಇತರೆ ಕೆಲಸದ ಒತ್ತಡದಿಂದ ಮುಕ್ತಗೊಳಿಸಿ ತರಗತಿ ಕೊಠಡಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಬೇಕಾಗಿದೆ. ಮಕ್ಕಳ ಕಲಿಕೆಯ ಬುನಾದಿ ಹಂತವಾದ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಕಲಿಕೆಯು ಉಂಟಾದರೆ ಎಸ್ ಎಸ್ ಎಲ್ ಸಿ ಯಲ್ಲಿ ಸೂಕ್ತ ಫಲಿತಾಂಶ ಗಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಹುನಗುಂದ ತಾಲೂಕ ಶಿಕ್ಷಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಎಂ. ಬಾಗವಾನ, ಮಾಜಿ ಅಧ್ಯಕ್ಷ ಸಿದ್ದು ಶೀಲವಂತರ, ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಸಂಗಣ್ಣ ಹಂಡಿ, ಮಕ್ಕಳ ಸಾಹಿತಿ ಅಶೋಕ ಬಳ್ಳಾ, ತಾಲೂಕ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭು ಮಾಲಗಿತ್ತಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಅಂದಾನಯ್ಯ ವಸ್ತ್ರದ, ಬಿಐಈಆರ್ಟಿ ಸಂಗಮೇಶ ಹೊದ್ಲೂರ, ಸಿ.ಆರ್.ಪಿ. ಸಂಗಪ್ಪ ಸಂಗಮ, ಶಿಕ್ಷಕ ಸುಭಾಷ ಕಣಗಿ, ಸಂಗಣ್ಣ ಶಿರೂರ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ