ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೋಲೀಸರ ನಿಷೇಧಾಜ್ಞೆ ನಡುವೆ ತೋಂಟದಾರ್ಯ ಮಠದ ಜಾತ್ರೆ, ಧಿಕ್ಕಾರ ಹಾಕಿದ ಶ್ರೀರಾಮ ಸೇನೆ ಕಾರ್ಯಕರ್ತರ ಬಂಧನ

ಗದಗ: ತೋಂಟದಾರ್ಯ ಮಠದ ರಥಬೀದಿಯಲ್ಲಿ ನಡೆಯುವ ಜಾತ್ರೆಯ ವಿರುದ್ಧ ಶ್ರೀರಾಮ ಸೇನೆ ನೀಡಿದ್ದ ಬಂದ್ ಕರೆಗೆ ನಗರದಲ್ಲಿ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಂದ್‌ ನಡೆಸಲು ಅವಕಾಶ ಕಲ್ಪಿಸದಂತೆ ಪೊಲೀಸ್‌ ಬಿಗಿ ಬಂದೋಬಸ್ತ್‌ ಹಾಕಲಾಗಿತ್ತು. ಪೋಲೀಸರ ನಿಷೇಧಾಜ್ಞೆ ನಡುವೆಯೇ ಬೆಳಿಗ್ಗೆ 10 ಗಂಟೆ ಸುಮಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಮಠದ ವಿರುದ್ಧ ಧಿಕ್ಕಾರ ಕೂಗಿದರು. ಜೈ ಶ್ರೀರಾಮ್‌ ಘೋಷಣೆ ಮೊಳಗಿಸುತ್ತಾ ರಥದ ಬೀದಿಗೆ ನುಗ್ಗಲು ಯತ್ನಿಸಿದರು.

ಆಗ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಖಾನಪ್ಪನವರ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಡಿ.ಆರ್‌ ವ್ಯಾನ್‌ನಲ್ಲಿ ಕರೆದೊಯ್ದರು, ಮಧ್ಯಾಹ್ನವಾಗುತ್ತಿದ್ದಂತೆ ಜಾತ್ರೆ ಆರಂಭಗೊಂಡಿತು, ಸಂಜೆ ಆಗುತ್ತಿದ್ದಂತೆ ಜನರು ಬಂದರು. ಯಥಾರೀತಿ ಜಾತ್ರೆ ಕಳೆಗಟ್ಟಿತು.

ಎಎಸ್‌ಪಿ ನಾಲ್ವರು ಡಿವೈಎಸ್‌ಪಿ ಹತ್ತು ಸಿಪಿಐ ಹತ್ತು ಪಿಎಸ್ಐ 200ಕ್ಕೂ ಹೆಚ್ಚು ಸಿಬ್ಬಂದಿ ಸೇರಿದಂತೆ ಎರಡು ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಆರು ಡಿಆರ್ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿತ್ತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌.ನೇಮಗೌಡ ತೋಂಟದಾರ್ಯ ಮಠ ಹಾಗೂ ಸುತ್ತಮುತ್ತಲಿನ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಸಿಬ್ಬಂದಿಗೆ ಸೂಚನೆ ನೀಡಿದರು.

ಶರಣ ಸಮಾಜದ ಪ್ರತಿಷ್ಠಿತ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಅನ್ಯ ಧರ್ಮದ ಹಾಗೂ ಹೊರಗಿನ ವ್ಯಾಪಾರಸ್ಥರಿಗೆ ಅವಕಾಶ ನೀಡಲಾಗಿದೆ ಎಂಬ ಕಾರಣದಿಂದ ಶ್ರೀರಾಮಸೇನೆ ಗದಗ ನಗರದಲ್ಲಿ ಬಂದ್‌ಗೆ ಕರೆ ನೀಡಿತ್ತು.

ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ತೋಂಟದಾರ್ಯ ಜಾತ್ರಾ ಸಮಿತಿಯವರು ಹಲವು ದಿನಗಳಿಂದ ಬಂದ್‌ಗೆ ಕಿವಿಗೊಡದಿರಿ ಎಂದು ಸ್ಪಷ್ಟನೆ ನೀಡುತ್ತಲೇ ಬಂದಿದ್ದರು.

ತೋಂಟದಾರ್ಯ ಮಠದ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಾ ಅಪಪ್ರಚಾರ ಮಾಡುತ್ತಿರುವ ಶ್ರೀರಾಮ ಸೇನೆಯ ಪ್ರಮುಖ ರಾಜು ಖಾನಪ್ಪನವರ ನಡೆಯನ್ನು ಶ್ರೀಮಠದ ಭಕ್ತರು ಖಂಡಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ