ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಿಶ್ರ, ಪೂರಕ ಕೃಷಿಗೆ ಒತ್ತು ನೀಡಿ

ಸುಳ್ಯ: ಜೇನು ಕೃಷಿ ಕ್ಷೇತ್ರಕ್ಕೆ ಆಧುನಿಕ ರೂಪ ನೀಡಿ ಜೇನು ಕೃಷಿಯನ್ನು ಲಾಭದಾಯಕವಾಗಿ ಮಾಡುವ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಕಾರ್ಯ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರಿ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಸುಸ್ಥಿರವಾಗಿರಲು ಮತ್ತು ಲಾಭದಾಯಕವಾಗಿಸಲು ರೈತರು ಒಂದೇ ರೀತಿಯ ಕೃಷಿಯನ್ನು ಅವಲಂಬಿಸದೆ ಮಿಶ್ರ ಹಾಗೂ ಪೂರಕ ಕೃಷಿಗೆ ಒತ್ತು ನೀಡಬೇಕು ಎಂದು ಹೇಳಿದರು.

ದೇಶದ 50 ಕೋಟಿ ಜನ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದ ಜಿಡಿಪಿಗೆ ಶೇ.30ರಷ್ಟನ್ನು ನೀಡುವ ಕೃಷಿ ಕ್ಷೇತ್ರ ಅತೀ ಹೆಚ್ಚು ಉದ್ಯೋಗವನ್ನೂ ನೀಡುತ್ತಿದೆ. 26 ಕೋಟಿ ಜನ ತೊಡಗಿಸಿಕೊಂಡಿರುವ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕಾ ಕ್ಷೇತ್ರ ಜಿಡಿಪಿಗೆ ಶೇ.18ನ್ನು ನೀಡುತ್ತಿದೆ. ಕೃಷಿಯಲ್ಲಿ ಗುಣಮಟ್ಟದ ಉತ್ಪಾದನೆಗೆ ಒತ್ತು ನೀಡಬೇಕು. ಆಗ ಉತ್ತಮ ಮಾರುಕಟ್ಟೆ ಮತ್ತು ದರ ದೊರೆಯಲು ಸಾಧ್ಯ. ನಾವು ಉತ್ಪಾದಿಸುವ ಆಹಾರ ವಸ್ತುಗಳು ವಿದೇಶಕ್ಕೆ ರಫ್ತಾಗುವ ಗುಣಮಟ್ಟದ್ದಾಗಿರಬೇಕು ಎಂದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಹಾರ ಪರೀಕ್ಷಾ ಪ್ರಯೋಗಾಲಯ ಆಗಬೇಕು. ಇದರಿಂದ ಆಹಾರ ಉತ್ಪಾದನೆಯ ಗುಣಮಟ್ಟ ಹೆಚ್ಚಾಗಲು ಮತ್ತು ಆರೋಗ್ಯ ಸಂರಕ್ಷಣೆಗೆ ಸಹಾಯಕ ಎಂದು ಅವರು ಹೇಳಿದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಪೂರಕವಾಗಿ ಕೃಷಿ ಕ್ಷೇತ್ರದಲ್ಲಿ ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸಲು ಆದ್ಯತೆ ನೀಡಬೇಕು. ಜೇನು ವ್ಯವಸಾಯ ಕ್ಷೇತ್ರದಲ್ಲಿ ವಿಫುಲ ಅವಕಾಶಗಳು ಇವೆ, ಆದುದರಿಂದ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಜೇನು ಉತ್ಪಾದಿಸಲು ಒತ್ತು ನೀಡಿ ಎಂದು ಹೇಳಿದರು. ಪ್ರಮುಖ ಬೆಳೆಯ ಜೊತೆಗೆ ಜೇನು ಕೃಷಿಯಂತೆ ಇತರ ಹಲವು ಪೂರಕ ಹಾಗೂ ಮಿಶ್ರ ಬೆಳೆಯನ್ನು ಬೆಳೆಸಿ ಎಂದ ಅವರು ಮಿಶ್ರ ಕೃಷಿಯಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದರು.

ವರದಿ : ಕೊಡಕ್ಕಲ್ ಶಿವಪ್ರಸಾದ್ , ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ