ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಬೇಡಿಕೆಗೆ ಆಗ್ರಹಿಸಿ, ಅನಿರ್ದಿಷ್ಟಾವಧಿ ಮುಷ್ಕರ : ಕರ್ತವ್ಯ ನಿರ್ಬಂಧಿಸಿದ ಪೌರ ನೌಕರರು

ಬಳ್ಳಾರಿ / ಕಂಪ್ಲಿ : ಪೌರ ನೌಕರರು ಕರ್ತವ್ಯಕ್ಕೆ ಗೈರಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ನೌಕರರ ಸಂಘದ ಕಂಪ್ಲಿ ಶಾಖೆಯಿಂದ ಪಟ್ಟಣದ ಪುರಸಭೆ ಆವರಣದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರ ನಡೆಸಿದರು.
ನಂತರ ಕಂಪ್ಲಿ ಶಾಖೆ ಅಧ್ಯಕ್ಷ ಪ್ರಕಾಶಬಾಬು ಮಾತನಾಡಿ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಸಹಾಯಕರು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್ ವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸುವುದು. ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು. ಎಲ್ಲಾ ನೌಕರರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡುವುದು.
ಈ ಎಲ್ಲಾ ಬೇಡಿಕೆಗಳನ್ನು ಈಡೇರುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ನಾಗಭೂಷಣ(ಆರ್‌ಒ), ಉಪಾಧ್ಯಕ್ಷ ಎನ್. ಓಬಳೇಶ, ಕಾರ್ಯದರ್ಶಿ ರಮೇಶ ಬೆಳಂಕರ್, ಉಪ ಕಾರ್ಯದರ್ಶಿ ವೆಂಕಟೇಶ, ಇಂಜಿನಿಯರ್ ಮೇಘನಾ, ಸಿಬ್ಬಂದಿ ವರ್ಗದವರಾದ ವಿಜಯಲಕ್ಷ್ಮಿ, ಮಹಮ್ಮದ ಗೌಸ್, ಸುಧಾಕರ, ಮೌನೇಶ, ಶಾಹಿದಾ, ಆಂಜಿನೇಯ, ಭರಮಪ್ಪ ಸೇರಿದಂತೆ ಪೌರ ಕಾರ್ಮಿಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ