ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತ ಸಂಘಟನೆಯ ಕೊಟ್ಟೂರು ತಾಲೂಕು ನೂತನ ಸಂಚಾಲಕರಾಗಿ ಪೃಥೇಶ್ವರ ದುರುಗಪ್ಪ ಅಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್ ಭರ್ಮಣ್ಣರವರ ನೇತ್ರತ್ವದಲ್ಲಿ ಪೃಥೇಶ್ವರ ದುರುಗಪ್ಪರವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸಂಘಟನೆಯ ನೂತನ ಕೊಟ್ಟೂರು ತಾಲೂಕು ಸಂಚಾಲಕರನ್ನಾಗಿ ಹಸಿರು ಶಾಲು ಹಾಕುವುದರ ಮೂಲಕ ಅಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಎನ್ ಭರ್ಮಣ್ಣ ಮಾತನಾಡಿ ನೂತನ ಸಂಚಾಲಕರು ಯಾವುದೇ ಪಕ್ಷ ಜಾತಿ ಧರ್ಮ ಎನ್ನದೆ ತಾಲೂಕಿನ ಪ್ರತಿಯೊಬ್ಬ ರೈತರಿಗೆ ಕಷ್ಟಕ್ಕೆ ಸ್ಪಂದಿಸಿ ನ್ಯಾಯ ಕೊಡಿಸುವಂತಹ ಪ್ರಾಮಾಣಿಕ ವ್ಯಕ್ತಿಯಾಗಬೇಕು, ಸಂಘಟನೆಯನ್ನು ಮುಂದುವರಿಸಿಕೊಂಡು ಹೋಗಬೇಕು ಹಾಗೂ ಸಂಘಟನೆಗಾಗಲಿ ಅಥವಾ ರೈತರಿಗಾಗಲಿ ಧಕ್ಕೆ ಬರುವಂತಹ ಕೆಲಸಗಳನ್ನು ಮಾಡಬಾರದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ನಾಗರಾಜ್, ಎ ಎಂ, ಕೊಟ್ರಯ್ಯ ಕೊಟ್ಟೂರೇಶ್ವರ ಮಠದ ಸಹಾಯಕ ಧರ್ಮಕರ್ತರು, ಕೆ, ತೋಪ್ರಾಜ್ ಚಪ್ಪರದಳ್ಳಿ ಉಪಸ್ಥಿತರಿದ್ದರು.

ವರದಿ ಶಶಾಂಕ್ ಪಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ