ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನ ವಾಪಸ್ ಪಡೆದಿರುವ ಸರ್ಕಾರದ ನಿರ್ಧಾರಕ್ಕೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಹಿಂದೆ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕ. ಸಾ. ಪ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರು.
ಮಹೇಶ್ ಜೋಶಿ ಅವರೇನೂ ತಮಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ಕೇಳಿರಲಿಲ್ಲ ತಾನಾಗಿಯೇ ಕೊಟ್ಟಿತ್ತು ಎಂದು ತೇಜಸ್ವಿ ತಿಳಿಸಿದ್ದಾರೆ.
ಇದೆ ಮೊದಲ ಬಾರಿಗೆ ಕ. ಸಾ. ಪ ಅಧ್ಯಕ್ಷರಾದವರಿಗೆ ಆಗಿನ ಬಿಜೆಪಿ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ರಾಗಿದ್ದ ಸುನೀಲ್ ಕುಮಾರ್ ಅವರು ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ ಗೆ ಗೌರವ ನೀಡುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದವರಿಗೆ ರಾಜ್ಯ ಸಚಿವ ಸ್ಥಾನಮಾನದ ಪದವಿಯನ್ನು ನೀಡುವಂತೆ ಕೋರಿದ್ದರು.ಅದಕ್ಕೆ ಸ್ಪಂದಿಸಿ ಅದೇ ರೀತಿ ಸ್ಥಾನಮಾನ ನೀಡಲಾಗಿತ್ತು.
ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಕ. ಸಾ. ಪ ಅಧ್ಯಕ್ಷರ ರಾಜ್ಯ ಸಚಿವ ಸ್ಥಾನವನ್ನು ಹಿಂಪಡೆದಿರುವುದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ ಗೆ ಮತ್ತು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.
ಯಾವುದೇ ಒಂದು ಉನ್ನತ ಪದವಿಯನ್ನು ಅಲಂಕರಿಸಿದ ವ್ಯಕ್ತಿಗಳ ಮೇಲೆ ಆರೋಪಗಳು ಬರುವುದು ಸಹಜ ಆದರೆ ಅದರ ಸತ್ಯಾಸತ್ಯತೆ ಅರಿಯದೆ ರಾಜ್ಯ ಸರ್ಕಾರ ಈ ರೀತಿಯ ಆತುರದ ನಿರ್ಧರ ಕೈಗೊಂಡಿರುವುದು ಸರಿಯಲ್ಲ ಎಂದು ತೇಜಸ್ವಿ ತಿಳಿಸಿದ್ದಾರೆ.
ಕ. ಸಾ. ಪ ಚುನಾವಣೆಯಲ್ಲಿ ದಾಖಲೆ ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ್ ಜೋಶಿ ಅವರಿಗೆ ನೀಡಿದ್ದ ಸಚಿವ ಸ್ಥಾನಮಾನ ವನ್ನು ಮತ್ತೆ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.
- ಕರುನಾಡ ಕಂದ
