ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾಜ ಮತ್ತು ಮಾಧ್ಯಮಗಳು ಕುರಿತ ಕಾರ್ಯಾಗಾರದ ಸಮಾರೋಪ ಸಮಾರಂಭ

ಬಾಗಲಕೋಟೆ : ಪ್ರಸ್ತುತ ದಿನಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಬೆಂಗಳೂರು ನಗರ ವಿವಿಯ ನಿವೃತ್ತ ಕುಲಪತಿಗಳು ಹಾಗೂ ಬೆಂಗಳೂರು ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎನ್ ನರಸಿಂಹಮೂರ್ತಿಯವರು ಅಭಿಪ್ರಾಯಪಟ್ಟರು
ಅವರು ಇತ್ತೀಚೆಗೆ ಬಾಗಲಕೋಟೆ ವಿಶ್ವವಿದ್ಯಾಲಯವು ಜಮಖಂಡಿಯಲ್ಲಿ ಏರ್ಪಡಿಸಿದ್ದ ಸಮಾಜ ಮತ್ತು ಮಾಧ್ಯಮಗಳು ಕುರಿತ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪ್ರಸ್ತುತ ದಿನಗಳಲ್ಲಿ ಪತ್ರಿಕೋದ್ಯಮ ಯುಗ ಎಲೆಕ್ಟ್ರಾನಿಕ್ಸ್ ಮಾಧ್ಯಮ ಯುಗ ಸಾಮಾಜಿಕ ಜಾಲತಾಣಗಳ ಯುಗಗಳ ವಿಚಾರಗಳು ಮರೆಯಾಗುತ್ತಿದ್ದು ಇನ್ನು ಮುಂದೆ ಆನ್ಲೈನ್ ಯುಗ ಎನ್ನುವಂಥದ್ದು ಬರುತ್ತಿದೆ ಎಂದು ತಿಳಿಸಿದರು.
ಇಂದಿನ ಸಂದರ್ಭದಲ್ಲಿ ಯುವ ಜನಾಂಗದವರು ಮಾಧ್ಯಮ ಕ್ಷೇತ್ರಕ್ಕೆ ಆಗಮಿಸುತ್ತಿದ್ದು ಅವರು ಸಮಾಜಮುಖಿಯಾಗಿ ಯೋಚಿಸುವ ಕೆಲಸವನ್ನು ಮಾಡಬೇಕೆಂದು ಅವರು ಅಭಿಪ್ರಾಯ ಪಟ್ಟರು. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವವರು ಪ್ರಾಮಾಣಿಕರಾಗಿ ಮತ್ತು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕೆಂದು ಅವರು ತಿಳಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕುಲ ಸಚಿವರಾದ ಪ್ರೊ. ದಯಾನಂದ ಸಾವುಕಾರ ಅವರು ಮಾತನಾಡುತ್ತಾ ನಮ್ಮ ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಮೊಟ್ಟ ಮೊದಲನೆಯದಾಗಿ ಪತ್ರಕರ್ತರಿಗಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಗಾರದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಪ್ರಸ್ತುತ ಸಂದರ್ಭದಲ್ಲಿ ಚಾಲ್ತಿಯಲ್ಲಿರುವ ವಿಚಾರಗಳನ್ನು ಚರ್ಚಿಸಿದರು ಎಂದು ಅವರು ತಿಳಿಸಿದರು.
ಡಾ. ಚಿದಾನಂದ ದವಳೇಶ್ವರ ಅವರು ಸ್ವಾಗತಿಸಿದರು, ಪ್ರಸಾರಂಗದ ನಿರ್ದೇಶಕರಾದ ಮಲ್ಲಿಕಾರ್ಜುನ ಮರಡಿಯವರು ವರದಿ ವಾಚಿಸಿದರು, ಕಾರ್ಯಾಗಾರದ ಸಹ ಸಂಚಾಲಕರಾದ ಡಾ. ಆರ್ ನಾಗರಾಜ್ ಅವರು ವಂದಿಸಿದರು.
ಈ ಕಾರ್ಯಗಾರದಲ್ಲಿ ತುಮಕೂರಿನ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಬಿ ಟಿ ಮುದ್ದೇಶ್ ಅವರು ನವ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಕುರಿತು, ಮೈಸೂರಿನ ಮಾಧ್ಯಮ ವಿಶ್ಲೇಷಕರಾದ ಡಾ. ಅಮ್ಮಸಂದ್ರ ಸುರೇಶ್ ಅವರು ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಕೃಷಿ ಪತ್ರಿಕೋದ್ಯಮ ಕುರಿತು ಬಳ್ಳಾರಿಯ ಹಿರಿಯ ಪತ್ರಕರ್ತರಾದ ಪ್ರೊ. ಸಿ ಮಂಜುನಾಥ್ ರವರು ಸಾಹಿತ್ಯ ಮತ್ತು ಮಾಧ್ಯಮ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ