ಬೆಂಗಳೂರು: ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು, ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ. ಕಳೆದ ವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಂಗಾಂಗ ದಾನ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.
