ಚಾಮರಾಜನಗರ/ ಹನೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಪಡಿತರ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಪಡಿತರ ವಿತರಕರು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಹಮ್ಮಿಕೊಂಡಿದ್ದ ನ್ಯಾಯ ಬೆಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಅತ್ಯಂತ ಕಡು ಬಡತನದ ವ್ಯಕ್ತಿ ಸಹ ಇದ್ದು ಅಂತವರಿಗೂ ಸಹ ಆಹಾರ ಪಡಿತರ ಸಿಗಬೇಕು ಆ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳು ಯಾವುದೇ ಕುಂದು ಕೊರತೆ ಆಗದಂತೆ ಗ್ರಾಹಕರಿಗೆ ಒದಗಿಸಬೇಕು ಎಂದರು.
ಪಡಿತರ ನ್ಯಾಯ ಬೆಲೆ ಮಾಲೀಕರು ಮಾತನಾಡಿ ನಮಗೆ ಇಲ್ಲಿಯವರೆಗೆ ಯಾವುದೇ ಸಮಸ್ಯೆ ಆಗಿರಲಿಲ್ಲ ಇದೀಗ 70 ವರ್ಷ ಮೇಲ್ಪಟ್ಟವರಿಗೆ ಬಯೋ ಮೆಟ್ರಿಕ್ ತಗೊಳುತ್ತಿಲ್ಲ ಇದರಿಂದ ತುಂಬಾ ತೊಂದರೆಯಾಗಿದೆ ಎಂದರು.
ಅಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಡಿಡಿ ಯೋಗಾನಂದ್, ತಹಶೀಲ್ದಾರ್ ವೈ ಕೆ ಗುರುಪ್ರಸಾದ್ ಶಿರಸ್ತೆದಾರ ವಿಶ್ವನಾಥ್,ಆಹಾರ ಇಲಾಖೆಯ ಇನ್ಸ್ಪೆಕ್ಟರ್ ಪ್ರಸಾದ್, ತಾಲೂಕಿನ ನ್ಯಾಯಬೆಲೆ ಅಂಗಡಿಯ ಮಾಲೀಕರು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್
