ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನರೇಗಾ ಕೆಲಸದ ಸ್ಥಳದಲ್ಲಿ ಹೃದಯಾಘಾತದಿಂದ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳಿದ ಜಿ.ಪಂ ಯೋಜನಾ ನಿರ್ದೇಶಕರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನರೇಗಾದಡಿ ನಾಗಲಾಪುರ ಕೆರೆ ಹೂಳೆತ್ತುವ ಕಾಮಗಾರಿ ಕೆಲಸಕ್ಕೆ ತೆರಳಿ ಕೂಲಿ ಕೆಲಸದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದ ಕೆಸರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ವಿರುಪಣ್ಣ ಅವರ ಮನೆಗೆ ಜಿಲ್ಲಾ ಪಂಚಾಯತ ಮಾನ್ಯ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ ಟಿ.ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ವೇಳೆ ಮೃತರ ಪತ್ನಿ ಲಕ್ಷ್ಮಿ ಮಲ್ಲಿಕಾರ್ಜುನ್ ಅವರ ಮಕ್ಕಳ ವಿದ್ಯಾಭ್ಯಾಸ,ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಡುವುದಾಗಿ ಹಾಗೂ
ಸರ್ಕಾರಿ ಸೌಲಭ್ಯ ಲಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕರಾದ ನಾಗೇಶ್ ಕುರಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣ,ತಾ.ಪಂ ವಿಷಯ ನಿರ್ವಾಹಕ ಭೀಮಣ್ಣ,ಗ್ರಾ.ಪಂ ಸಿಬ್ಬಂದಿಗಳು,ಇತರರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ