ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ತವ್ಯಲೋಪ ಎಸಗುತ್ತಿರುವ ಅಧಿಕಾರಿ ಮೇಲೆ ಕ್ರಮಕ್ಕಾಗಿ – ಅಂಗವಿಕಲರ ಮನವಿ

ಗುರುಮಠಕಲ್ ಪುರಸಭೆ ಕಾರ್ಯಾಲಯದಲ್ಲಿ ಯೂ.ಆ‌ರ್.ಡಬ್ಲೂ ಸರಿಯಾದ ರೀತಿಯಲ್ಲಿ ಕೆಲಸ ಮಾಡದಿರುವ ಬಗ್ಗೆ ಪುರಸಭೆ ಕಾರ್ಯಾಲಯದ ಅಧಿಕಾರಿಗೆ ನಿನ್ನೆ ಮನವಿ ನೀಡಿದರು.

ಗುರುಮಠಕಲ್ ಪುರಸಭೆ ಕಾರ್ಯಲದಯಲ್ಲಿ (ಯೂ.ಆರ್.ಡಬ್ಲೂ) ನಗರ ಪುನ‌ರ್ ವಸತಿ ಕಾರ್ಯಕರ್ತ ಇವರು ಹಲವು ವರ್ಷಗಳ ಹಿಂದೆ ನೇಮಕಗೊಂಡಿದ್ದು ಕಛೇರಿಯ ಭೇಟಿ ನೀಡದೆ ಹಾಗೂ ಸರಿಯಾದ ರೀತಿಯಲ್ಲಿ ಕೆಲಸ ಮಾಡದೆ ವಿಕಲಚೇತನರು ಕಚೇರಿಗೆ ಭೇಟಿ ನೀಡಿದಾಗ ಕಚೇರಿಯಲ್ಲಿ ಇರುವುದಿಲ್ಲಾ, ಈಗಾಗಲೇ ಹಲವು ಬಾರಿ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸಹ ಅವರು ಲಿಖಿತ ರೂಪದಲ್ಲಿ ಮನವಿ ನೀಡಲು ಸೂಚಿಸಿದ ಹಿನ್ನಲೆಯಲ್ಲಿ ನಿನ್ನೆ ವಿಕಲಚೇತನರು ಪುರಸಭೆ ಕಾರ್ಯಾಲಯಕ್ಕೆ ಭೇಟಿ ಮಾಡಿದಾಗ ಮುಖ್ಯಾಧಿಕಾರಿ, ವ್ಯವಸ್ಥಾಪಕರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು ಸೇರಿದಂತೆ ಕಚೇರಿಯಲ್ಲಿ ಯಾರೂ ಇಲ್ಲದ ಕಾರಣ ಮುಖ್ಯಾಧಿಕಾರಿಗಳ ಪರವಾಗಿ ಕರ ವಸೂಲಿಗಾರರಾದ ಮಲ್ಲಯ್ಯ ಅವರಿಗೆ ನೀಡಿದರು.
ಅಧಿಕಾರಿಗಳು ಕಚೇರಿಗೆ ಬಾರದೆ ಸರಕಾರದಿಂದ ಸಿಗುವ ಸೌಲಭ್ಯಗಳಿಂದ ವಿಕಲಚೇತನರು ವಂಚಿತರಾಗುತ್ತಿದ್ದಾರೆ. ಆದ್ದರಿಂದ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ವ್ಯಕ್ತಿಯನ್ನು ಆ ಸ್ಥಾನದಲ್ಲಿ ನೇಮಕ ಮಾಡಿಕೊಳ್ಳಬೇಕು, ವಿಕಲಚೇತನರನ್ನು ಸೌಲಭ್ಯದಿಂದ ವಂಚಿತರಾನ್ನಾಗಿಸದೆ ಅವರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು, ಈಗಾಗಲೇ ಈ ಹಾಜರಾತಿ ಚಾಲ್ತಿಯಲ್ಲಿ ಇರುವುದರಿಂದ ಅವರು ಈ ಹಾಜರಾತಿ ಮಾಡಿರುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿದ್ದಣ್ಣ ಗೌಡ ಆರ್.ಪಿಡಿ.ಟಾಸ್ಕ್ ಫೋರ್ಸ್ ಅಧ್ಯಕ್ಷರು ಗುರುಮಠಕಲ್ ಮತ್ತು ಟಾಸ್ಕ್ ಫೋರ್ಸ ಸದಸ್ಯರು ವಿನಂತಿಸಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ