ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಕ್ರೀದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ

ಗದಗ/ರೋಣ :ಕುರಡಗಿ ಗ್ರಾಮದ ಮುಸ್ಲಿಮ್ ಸಮಾಜದವರು ಪವಿತ್ರ ಬಕ್ರೀದ್ ಹಬ್ಬದ ಅಂಗವಾಗಿ
ಮಸ್ಜಿದ್ ಯಲ್ಲಿ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಬಾಂಧವರು ಪವಿತ್ರ ಬಕ್ರೀದ್ ಹಬ್ಬವನ್ನು ಮೌಲಾನ ಶಬ್ಬೀರ್ ಅಹ್ಮದ್ ಕಲ್ಮನಿ ಇವರ ನೇತೃತ್ವಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಬಕ್ರೀದ್ ಹಬ್ಬದ ದಿನವಾದ ಇಂದು ಮುಸ್ಲಿಂ ಬಾಂಧವರು ಶುಭ್ರ ಬಟ್ಟೆ ತೊಟ್ಟು ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಭೇದ ಭಾವ ಇಲ್ಲದೆ ಎಲ್ಲರೂ ಪರಸ್ಪರ ಹಬ್ಬವನ್ನು ಆಚರಿಸಿ ಶುಭಾಶಯಗಳು ಕೋರಿಕೊಂಡರು.

ಇಸ್ಲಾಂ ಆಚರಣೆಗಳು ಪಾಲಿಸಿದರೆ ಸಾಲದು ವರ್ಷದುದ್ದಕ್ಕೂ ಅವುಗಳನ್ನು ಪಾಲಿಸಿ ಸರ್ವಶಕ್ತ ಅಲ್ಲಾಹನ ಕೃಪೆಗೆ ಪಾತ್ರರಾಗಬೇಕು ಆಗ ನಮ್ಮ ಬದುಕು ಸಾರ್ಥಕ ಎಂದು ಮೌಲಾನ ಶಬ್ಬೀರ್ ಅಹ್ಮದ್ ಕಲ್ಮನಿಹೇಳಿದರು.

ಅಂಜುಮನ್ ಎ ಇಸ್ಲಾಂ ಕಮಿಟಿ ಅಧ್ಯಕ್ಷರು ಹುಚ್ಚು ಸಾಬ್ ಗೂಗೇರಿ ಯವರು
ಮುಸ್ಲಿಂ ಬಾಂಧವರಿಗೆ ಶಾಂತಿ ಸಾಮರಸ್ಯ ಮತ್ತು ಪವಿತ್ರತೆಯ ತ್ಯಾಗ ಬಲಿದಾನ ಸಂಕೇತವಾಗಿರುವ ಬಕ್ರೀದ್ ಹಬ್ಬದ ಶುಭಾಶಯಗಳು ತಿಳಿಸಿದರು.

ಸಮುದಾಯದ ಜನರು ದಿನಾಂಕ 22/06/2025 ನೆ ರವಿವಾರ ನಡೆಯುವ ಮಸೀದಿಯ ಉದ್ಘಾಟನೆ ಮತ್ತು ಸಾಮೂಹಿಕ ವಿವಾಹಗಳ ಕಾರ್ಯಕ್ರಮಕ್ಕೆ ಎಲ್ಲರೂ ಒಗ್ಗಟ್ಟಾಗಿ ಕೈಜೋಡಿಸಬೇಕೆಂದು ಗ್ರಾಮ ಪಂಚಾಯತಿ ಸದಸ್ಯರಾದ ಜ .ಶೌಕತಅಲಿ ನದಾಫ್ ತಿಳಿಸಿದರು.
ಸಮಸ್ತ ಮುಸ್ಲಿಂ ಬಾ0ದವರು ಈದ್ ಉಲ್ ಅದಾ ಬಕ್ರೀದ್ ಹಬ್ಬದ ಪರಸ್ಪರ ಶುಭಾಶಯಗಳನ್ನು ಕೋರಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ