ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.
ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಗ್ರಾಮದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು.
ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ ಆಚರಿಸಿದರು.
ಮುಂಜಾನೆಯೇ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಂಡಹಳ್ಳಿ ಗ್ರಾಮದವರೆ ಆದ ಮೌಲಾನ ವಾಸಿಖ್ ಪ್ರವಚನ ನೀಡಿ ಮಾತನಾಡಿ ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ಕರೆ ನೀಡಿದರು.
ನಂತರ ಸಾಮೂಹಿಕ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಸಿಕೊಟ್ಟರು.
ಪ್ರಾರ್ಥನೆಯ ಬಳಿಕ ಮುಸ್ಲಿಂ ಭಾಂದವರು ಪರಸ್ಪರ ಶುಭಾಶಯ ವಿನಿಮಯ, ಸಾಮೂಹಿಕ ಪ್ರಾರ್ಥನೆಯ ಸಂದರ್ಭದಲ್ಲಿ ಮಸೀದಿಗಳ ಪೇಶ ಇಮ್ಮಮ್ ಗುರುಗಳು ಮುಸ್ಲಿಂ ಸಮಾಜದ ಹಿರಿಯರು ಹಾಗೂ ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು. ಇನ್ನು ಸಾಮೂಹಿಕ ಪ್ರಾರ್ಥನೆಯಲ್ಲಿ ಮಕ್ಕಳು ಕೂಡಾ ಪಾಲ್ಗೊಂಡರು.
ಬಕ್ರೀದ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.
ವರದಿ : ಉಸ್ಮಾನ್ ಖಾನ್
