ಕಲಬುರಗಿ: ಹದಿನೆಂಟು ವರ್ಷದ ನಂತರ ಆರ್ಸಿಬಿ ಟ್ರೋಫಿ ಗೆದ್ದಿರುವುದು ನಾಡಿನ ಜನತೆಗೆ ಖುಷಿ ಇದೆ ಆದರೆ, ಈ ಸಂಭ್ರಮ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜ್ಯ ಕಾಂಗ್ರೆಸ್ ಸರಕಾರ ಮುನ್ನೆಚರಿಕೆ ಕ್ರಮ ವಹಿಸದ ರಾಜ್ಯ ಸರಕಾರದ ವಿರುದ್ದ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬೆಂಗಳೂರಿನಲ್ಲಿ ಬುಧವಾರ ನಡೆದ ಆರ್ಸಿಬಿ ತಂಡದ ಆಟಗಾರರ ಅಭಿನಂದನಾ ಸಮಾರಂಭದಲ್ಲಿ ನಡೆದ ಕಾಲ್ತುಳಿತಕ್ಕೆ 11 ಜನರು ಬಲಿಯಾದ ಘಟನೆಗೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಅವರು ದೂರಿದ್ದಾರೆ. ಇಷ್ಟು ಅವಸರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಬಂದ ಜನರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದೆ ಈ ಭಯಾನಕ ಘಟನೆಗೆ ಕಾರಣವಾಗಿದೆ ಎಂದರು. ಆರ್ಸಿಬಿ ಗೆಲುವಿನಿಂದ ಎಲ್ಲರಿಗೂ ಖುಷಿಯಾಗಿದೆ. ರಾಜ್ಯದಲ್ಲಿ ಸಂಭ್ರಮದ ವಾತವರಣ ಉಂಟಾಗಿತ್ತು. ಆದರೆ, ವ್ಯವಸ್ಥಿತವಾಗಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸದೆ ತರಾತುರಿಯಲ್ಲಿ ಹಮ್ಮಿಕೊಂಡಿದ್ದೇ ಇಂತಹ ದುರಂತಕ್ಕೆ ಕಾರಣವಾಗಿದೆ. ಪೊಲೀಸ್ ಅಧಿಕಾರಿಗಳು ತಕ್ಷಣಕ್ಕೆ ಬೇಡ ಎಂದಿದ್ದಾರೆಂಬ ಮಾಹಿತಿಯೂ ಇದೆ. ಆದರೆ, ರಾಜ್ಯ ಸರಕಾರವು ಇದನ್ನು ಲೆಕ್ಕಿಸದೇ ಹಮ್ಮಿಕೊಂಡ ಕಾರ್ಯಕ್ರಮ ಇಷ್ಟು ದೊಡ್ಡದುರಂತಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮೃತರ ಕುಟುಂಬಕ್ಕೆ ಘೋಷಣೆ ಮಾಡಿದ ಪರಿಹಾರದ ಮೊತ್ತ ಹೆಚ್ಚಿಸಬೇಕು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
- ಕರುನಾಡ ಕಂದ
