ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ : ಮಂಜುನಾಥ ನಾಯಕ

ಬಳ್ಳಾರಿ / ಕಂಪ್ಲಿ : ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕ್ರಿಯಾಶೀಲತೆಯಿಂದ ಶ್ರಮವಹಿಸಬೇಕು ಎಂದು ತಹಶೀಲ್ದಾರ್ ಮಂಜುನಾಥ ನಾಯಕ ಹೇಳಿದರು.
ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕಲಿಯುವ ವಯಸ್ಸಿನಲ್ಲಿ ಮಕ್ಕಳ ದುಡಿಮೆ ಆತoಕಾರಿ ಬೆಳವಣಿಗೆಯಾಗಿದೆ. ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಕಠಿಣ ಕಾನೂನು ಕ್ರಮ ಹಾಗೂ ಜನಜಾಗೃತಿ ಅವಶ್ಯಕವಾಗಿದೆ ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಶಿಕ್ಷಣ, ಆಟ, ವಿರಾಮ, ಆಹಾರ ಎಲ್ಲಾ ರೀತಿಯ ಹಕ್ಕಗಳನ್ನು ಪಡೆಯಬೇಕು. ಇಲ್ಲವಾದರೆ ಅವರ ಬೆಳವಣಿಗೆ ಕುಂಠಿತವಾಗುತ್ತದೆ ಬಡತನ ನೆಪಮಾಡಿಕೊಂಡು ಬಾಲಕಾರ್ಮಿಕತನಕ್ಕೆ ಇಳಿಯುವ ಮಕ್ಕಳು ತಮ್ಮ ಎಲ್ಲಾ ಮಕ್ಕಳ ಹಕ್ಕುಗಳಿಂದ ವoಚಿತರಾಗುತ್ತಿದ್ದಾರೆ ಅದನ್ನು ತಡೆಗಟ್ಟಲು ಮತ್ತು ಜಾಗೃತಿ ಮೂಡಿಸಲು ವಿಶ್ವ ಸಂಸ್ಥೆಯು ಪ್ರತಿ ವರ್ಷ ಜೂನ್ 12ನ್ನು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವೆಂದು ಆಚರಿಸಲಾಗುತ್ತದೆ ಎಂದು ಹೇಳಿದರು.
ಮುಖ್ಯಗುರು ಕೆ.ವಿಷ್ಣು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ಮಕ್ಕಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಆರ್. ಕೆ. ಶ್ರೀ ಕುಮಾರ, ಪ್ರಭಾರಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಶಾಲೆಯ ಮುಖ್ಯಸ್ಥ ಸುಬ್ಬಾರಾವ್, ಎಎಸ್‌ಐ ಗಂಗಣ್ಣ, ಶಿಕ್ಷಣ ಸಂಯೋಜಕ ಟಿ.ಎಂ.ಬಸವರಾಜ, ಆರೋಗ್ಯ ನಿರೀಕ್ಷಕ ಪಿ.ಬಸವರಾಜ, ಅಂಗನವಾಡಿ ಮೇಲ್ವಿಚಾರಕಿ ಲತೀಫಾಬೇಗಂ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ