ಬೆಂಗಳೂರು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಜನಾರ್ಧನ್ ರೆಡ್ಡಿ ಬಿಡುಗಡೆಗೊಂಡರು.
ಇತ್ತೀಚೆಗೆ ಓಬಳಾಪುರಂ ಮೈನಿಂಗ್ ಕಂಪನಿ ಕೇಸ್ನಲ್ಲಿ ಹೈದರಾಬಾದ್ನ ನಾಂಪಲ್ಲಿ ಸಿಬಿಐ ಕೋರ್ಟ್, ಜನಾರ್ದನ ರೆಡ್ಡಿ ಅವರಿಗೆ 7 ವರ್ಷ ಶಿಕ್ಷೆ ವಿಧಿಸಿತ್ತು. ತೆಲಂಗಾಣ ಹೈಕೋರ್ಟ್ ಇಂದು ಸಿಬಿಐ ಕೋರ್ಟ್ ವಿಧಿಸಿದ್ದ 7 ವರ್ಷ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆಯಿಂದಾಗಿ ರೆಡ್ಡಿಗೆ ರಿಲೀಫ್ ಸಿಕ್ಕಿದೆ.
ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಬಿಜೆಪಿ ಮುಖಂಡರು ಹಾಜರಿದ್ದು ಅವರಿಗೆ ಅದ್ದೂರಿಯಾಗಿ ಸ್ವಾಗತಿಸಿದರು.
