ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೋಟದ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡುವಂತೆ ರೈತ ಮುಖಂಡ ವೀರಣ್ಣ ಗಂಗಾಣಿ ಒತ್ತಾಯ

ಕಲಬುರಗಿ :ಜೆಸ್ಕಾಂ ಜಿಲ್ಲಾಧಿಕಾರಿಗಳು ಹಾಗೂ ತಾಲೂಕ ಜೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ಚಿಂಚೋಳಿ ಹಾಗೂ ಕಾಳಗಿ ವ್ಯಾಪ್ತಿಯಲ್ಲಿರುವ ಎಲ್ಲಾ ತೋಟದ ಮನೆಗಳಿಗೆ ಹಾಗೂ ಜಮೀನುಗಳಲ್ಲಿ ನಿರ್ಮಿಸಿರುವ ಮನೆಗಳಿಗೆ ಸರ್ಕಾರದ ಆದೇಶದಂತೆ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ಮಾಡುವಂತೆ ರಾಜ್ಯ ರೈತ ಸಂಘದ ಹಾಗೂ ರೈತ ಸೇನೆ ತಾಲೂಕ ಅಧ್ಯಕ್ಷರು ವೀರಣ್ಣ ಗಂಗಾಣಿ ಒತ್ತಾಯಿಸಿದರು.
ಜೆಸ್ಕಾಂ ಕಛೇರಿ ಎದುರು ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಸರ್ಕಾರ ಆದೇಶದಂತೆ ತೋಟದ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡುವಂತೆ ಜೆಸ್ಕಾ ಎಇಇ ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಚಿಂಚೋಳಿ ಹಾಗೂ ಕಾಳಗಿ ತಾಲೂಕಿನ ಜೆಸ್ಕಾಂ ವ್ಯಾಪ್ತಿಯಲ್ಲಿ ರೈತರು ತೋಟದಲ್ಲಿ ನಿರ್ಮಿಸಿರುವ ಹಲವಾರು ಮನೆಗಳಿವೆ, ಜಮೀನಿನಲ್ಲಿ ಹಾಗೂ ಗ್ರಾಮದಿಂದ ದೂರ ಇರುವ ಹೊಲಗಳಲ್ಲಿ ನಿರ್ಮಿಸಿದ ಮನೆಗೆ ರಾತ್ರಿ ವೇಳೆ ವಿದ್ಯುತ್ ಸರಬರಾಜು ಇಲ್ಲದಿರುವುದರಿಂದ ವಾಸಿಸುತ್ತಿರುವಂತ ರೈತರಿಗೆ, ರೈತನ ಮಕ್ಕಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ.
ಕತ್ತಲಲ್ಲಿ ವಿಷಜಂತು ಹಾವುಗಳು, ಚೇಳುಗಳು ಕಾಡು ಪ್ರಾಣಿಗಳಿಂದ ಮತ್ತು ಮಕ್ಕಳಿಗೆ ವಿದ್ಯಾಭ್ಯಾಸ ಹೀಗೆ ಹಲವಾರು ರೀತಿಯಲ್ಲಿ ತೊಂದರೆಯಾಗುತ್ತಿದೆ. ಆದ ಕಾರಣ ಈಗಾಗಲೇ ಸರಕಾರದ ರೈತರ ಬಗ್ಗೆ ಕಾಳಜಿ ವಹಿಸಿ ಜನವರಿಯಿಂದಲೇ ರೈತರಿಗೆ ವಿದ್ಯುತ್ ಸರಬರಾಜು ಮಾಡುವಂತೆ ಆದೇಶ ಹೊರಡಿಸಲಾಗಿದೆ. ಆದ್ದರಿಂದ ವಿಳಂಬ ನೀತಿ ಅನುಸರಿಸದೇ ಬೇಗನೆ, ಅತಿ ತುರ್ತಾಗಿ ಅಧಿಕಾರಿಗಳನ್ನು ನೇಮಿಸಿ ತೋಟದ ಮನೆಗಳಿಗೆ ವಿದ್ಯುತ್ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಕೆ. ಎಂ. ಬಾರಿ ಶಿವರಾಜ್ ಪಾಟೀಲ್ ಗೋಣಗಿ, ರಾಜಕುಮಾರ್ ತಳವಾರ್, ಕಿರಣ ಮಡಿವಾಳ, ನಾಯಕ ರೈತ ಮುಖಂಡರು ಇತರರು ಇದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ