ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮಂಡಳಿಯ ‘ಆರೋಗ್ಯ ಆವಿಷ್ಕಾರ’ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಇಂದು ಚಾಲನೆ ನೀಡಿದ್ದಾರೆ.
ಕೆಕೆಆರ್ಡಿಬಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸುಮಾರು ಸಾವಿರಾರು ಜನಗಳ ಸಮ್ಮುಖದಲ್ಲಿ ಜರುಗಿತು.
₹440. 68 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ, ಸಚಿವರಾದ ದಿನೇಶ ಗುಂಡೂರಾವ ಸೇರಿದಂತೆಯೇ ಏಳು ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಹಾಜರಿದ್ದರು.
ಆರೋಗ್ಯ ಅವಿಷ್ಕಾರದಲ್ಲಿ ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಅನುಕೂಲವಾಗಲು 1200ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, 6 ಸಮುದಾಯ ಆರೋಗ್ಯ ಕೇಂದ್ರಗಳ ಸ್ಥಾಪನೆ, 1 ನಗರ ಆರೋಗ್ಯ ಕೇಂದ್ರಕ್ಕೆ ಚಾಲನೆ, 14 ಸಿಎಚ್ಸಿಗಳನ್ನು 100 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವುದು, 3 ಸಿಎಚ್ಸಿಗಳನ್ನು 100 ರಿಂದ 1500 ಹಾಸಿಗೆಗೆ ಮೇಲ್ದರ್ಜೆಗೇರಿಸುವುದು, 30 ಹಾಸಿಗೆ 3 ಸಿಎಚ್ಸಿಗಳನ್ನು 150 ಹಾಸಿಗೆಗೆ ಹೆಚ್ಚಿಸುವುದು, 2 ಪಿಎಚ್ಸಿಗಳನ್ನು 100 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ವರದಿ: ಜಗದೀಶ್ ಕುಮಾರ್ ಭೂಮಾ
