ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೇಂದ್ರ ಸರ್ಕಾರದ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ : ವೈ.ಎಂ.ಸತೀಶ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕ ಸುರೇಶ ಬಾಬು ಅವರ ತುಂಗಭದ್ರಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲ ವತಿಯಿಂದ ವಿಕಸಿತ ಭಾರತದ ಅಮೃತ ಕಾಲ ಸೇವೆ, ಮಾಶಾಸನ, ಬಡವರ ಕಲ್ಯಾಣ್ ಮೋದಿ ಸರ್ಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆ ವಿಕಸಿತ ಭಾರತ ಸಂಕಲ್ಪ ಸಭೆಯ ಶನಿವಾರ ಜರುಗಿತು.
ಸಭೆಯ ಅಧ್ಯಕ್ಷತೆವಹಿಸಿ ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ ಮಾತನಾಡಿ, ಕೇಂದ್ರ ಸರಕಾರದ ಅನೇಕ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕೆಂಬುದು ವಿಕಸಿತ ಭಾರತ ಸಂಕಲ್ಪದ ಉದ್ದೇಶವಾಗಿದೆ. ಕೇಂದ್ರ ಸರಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಈ ದೇಶದ ಬಡವರ ಸಂಕಷ್ಟ, ಈ ದೇಶದ ರೈತರ ಸಮಸ್ಯೆಗಳನ್ನು ಅರಿತುಕೊಂಡು ಪಿಎಂ ಕೃಷಿ ಸಮ್ಮಾನ್, ಫಸಲ್ ಭೀಮಾ, ಗೊಬ್ಬರದ ಸಬ್ಸಿಡಿ, ಈ ದೇಶದ ಪ್ರತಿ ಮನೆಗೂ ಶೌಚಾಲಯ, ಪಿ.ಎಂ ಆವಾಜ್ ಯೋಜನೆ, ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ನೀಡಿದ ಶ್ರೇಯಸ್ಸು ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.
ನಂತರ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ನೀಡಿದೆ. ಮುಂದಿನ ದಿನದಲ್ಲಿ ಕಂಪ್ಲಿ ಪುರಸಭೆಯ ವಾರ್ಡ್ ಚುನಾವಣೆಗಳು ಬರಲಿದ್ದು, ಈಗಲಿಂದಲೇ ಸಂಘಟನೆ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ವಿಕಸಿತ ಭಾರತ ಸಂಕಲ್ಪ ಹಿನ್ನಲೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಇತ್ತೀಚೆಗೆ ವಿಮಾನದ ದುರ್ಘಟನೆಯಲ್ಲಿ ಸಾಕಷ್ಟು ಜನರು ಮೃತಪಟ್ಟ ಪರಿಣಾಮ ಒಂದು ನಿಮಿಷ ಮೌನಾಚಾರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಯರಂಗಳಿ ತಿಮ್ಮಾರೆಡ್ಡಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಸುಗುಣ, ಪುರಸಭೆ ಸದಸ್ಯರಾದ ರಾಮಾಂಜಿನೇಯ, ಟಿ.ವಿ.ಸುದರ್ಶನರೆಡ್ಡಿ, ಆರ್.ಆಂಜನೇಯ, ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ನಗರ ಘಟಕ ಅಧ್ಯಕ್ಷ ಮುರುಳಿ ಮೋಹನ್ ರೆಡ್ಡಿ, ಮುಖಂಡರಾದ ಅಳ್ಳಳ್ಳಿ ವಿರೇಶ, ಪಿ.ಬ್ರಹ್ಮಯ್ಯ, ಜಿ.ಸುಧಾಕರ, ಎಂ.ಗುರುರಾಜ, ದೇವಲಾಪುರ ರವಿ, ಕೊಡಿದಲ್ ರಾಜು, ಬಿ.ದೇವೆಂದ್ರ, ಚಂದ್ರಶೇಖರ ಗೌಡ, ಶ್ರೀನಿವಾಸ, ಶಿವುಕುಮಾರ, ಬಸವಪ್ರಭು, ಹೂವಣ್ಣ, ಕಟ್ಟೆ ವಿಶ್ವನಾಥ, ರಬಿಯಾ ನಿಸಾರ ಸೇರಿದಂತೆ ಅನೇಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ