ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆ, ಗ್ರಂಥಾಲಯ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಪೂಜೆ ಸಲ್ಲಿಸಿದ ಶಾಸಕ ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ : ರಸ್ತೆ, ಕಟ್ಟಡ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯದೊಂದಿಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಮೊದಲ ಧ್ಯೇಯವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಹಂಪಾದೇವನಹಳ್ಳಿ ಗ್ರಾ. ಪಂ ವ್ಯಾಪ್ತಿಯ ಜವುಕು ಗ್ರಾಮದ ಸರ್ಕಾರಿ ಪ್ರೌಢಶಾಲಾ ಬಳಿಯಲ್ಲಿರುವ ರಸ್ತೆಯಲ್ಲಿ 2024-25ನೇ ಸಾಲಿನ ಕಲ್ಯಾಣ ಪಥ ಯೋಜನೆಯಡಿಯ ಸುಮಾರು 472.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ದೇವಸಮುದ್ರ ಗ್ರಾಮದ ಎಲ್‌ಎಲ್‌ಸಿ ಕಾಲುವೆಯಿಂದ ಜವುಕುವರೆಗಿ ರಸ್ತೆ ಅಭಿವೃದ್ಧಿ ಹಾಗೂ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಸುಮಾರು 14 ಲಕ್ಷ ವೆಚ್ಚದ ಗ್ರಂಥಾಲಯ ನಿರ್ಮಾಣದ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ರೈತರ ರಸ್ತೆಗಳು ಅಭಿವೃದ್ಧಿಯಾದರೆ, ಹೊಲ ಗದ್ದೆಗಳಿಗೆ ಓಡಾಡಲು ಬಹಳಷ್ಟು ಅನುಕೂಲವಾಗಲಿದೆ ಮತ್ತು ಗ್ರಂಥಾಲಯದಿಂದ ಮಕ್ಕಳ ಮತ್ತು ಯುವಕರಿಗೆ ಪುಸ್ತಕದ ಜ್ಞಾನದ ಜತೆಗೆ ವಿದ್ಯಾರ್ಜನೆಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ. ಪಂ ಸದಸ್ಯರಾದ ಸಿ.ಬಸವರಾಜ, ಎಸ್ ಡಿ ಎಂ ಸಿ ಅಧ್ಯಕ್ಷ ಪಕ್ಕೀರಪ್ಪ, ಪುರಸಭೆ ಸದಸ್ಯ ಸಿ.ಆರ್.ಹನುಮಂತ, ಮುಖಂಡರಾದ ಕೆ.ಷಣ್ಮುಕಪ್ಪ, ಜವುಕು ಮಲ್ಲಿಕಾರ್ಜುನ, ಬಸವರಾಜ, ಯಂಕಪ್ಪ, ರಾಜನಗೌಡ, ಕುಮಾರಸ್ವಾಮಿ, ನೀರಂಟಿ ವಿರೇಶ, ಸಿದ್ದಪ್ಪ, ಜಡೆಪ್ಪ, ಯಂಕೋಬ, ವಿರೇಶ, ಲೋಕೇಶ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ