ಬಳ್ಳಾರಿ / ಕಂಪ್ಲಿ : ಎಸ್ ಸಿ, ಎಸ್ ಟಿ ಸಮಾಜದ ಶಾಸಕರನ್ನು ಕೇಂದ್ರ ಸರ್ಕಾರವು ಇಡಿ ಅಧಿಕಾರಿಗಳ ಮೂಲಕ ಟಾರ್ಗೇಟ್ ಮಾಡಿದೆ ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವೀರಾಂಜಿನೀಯಲು ಆರೋಪಿಸಿದರು.
ಅವರು ಭಾನುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ಥಳೀಯ ಶಾಸಕರಾದ ಜೆ.ಎನ್.ಗಣೇಶ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಇವರ ಅಭಿವೃದ್ಧಿ ಕಾರ್ಯವನ್ನು ಸಹಿಸದ ಬಿಜೆಪಿಯವರು ರಾಜಕೀಯ ಷಡ್ಯಂತ್ರದಿಂದ ಇಡಿ ಅಧಿಕಾರಿಗಳಿಂದ ದಾಳಿ ಮಾಡಿಸಿದ್ದಾರೆ. ದಲಿತ ಮತ್ತು ವಾಲ್ಮೀಕಿ ಸಮಾಜದ ಶಾಸಕರನ್ನು ಕುಗ್ಗಿಸುವ ಕೆಲಸಕ್ಕೆ ಕೈಹಾಕಿದ್ದು, ಇದರಿಂದ ಯಾವುದೇ ಪ್ರಯೋಜನೆಯಾಗುವುದಿಲ್ಲ. ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಅಧಿಕಾರ ಇಲ್ಲದೇ ಮಂಗನಂತಿರುವ ಬಿಜೆಪಿಗರು ಕಾಂಗ್ರೆಸ್ ಶಾಸಕರ, ಸಂಸದರ ಮೇಲೆ ದಾಳಿ ಮಾಡಿಸುತ್ತಿದ್ದಾರೆ. ಇ.ಡಿ ದಾಳಿ ವೇಳೆ ಶಾಸಕರು ಖಡಕ್ಕಾಗಿ ಉತ್ತರ ನೀಡಿದ್ದಾರೆ. ಇಂತಹ ದಾಳಿಗೆ ಹೆದರುವವರಲ್ಲ ನಮ್ಮ ಶಾಸಕರು. ಮುಂದಿನ ದಿನದಲ್ಲಿ ಇದೇ ರೀತಿಯಲ್ಲಿ ಐಟಿ ದಾಳಿ ಮಾಡಿಸಿದರೆ, ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ವರದಿ : ಜಿಲಾನಸಾಬ್ ಬಡಿಗೇರ್



















