ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣೆ ಶಿಬಿರ

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ಉಚಿತವಾಗಿ ಪ್ರಾಥಮಿಕ ಕೇಂದ್ರದಲ್ಲಿ ತಪಾಸಣೆ ಮಾಡಿಸಿ ಕೊಳ್ಳುವುದರ ಜೊತೆಗೆ ಅರೋಗ್ಯ ಕಾಪಾಡಲು ಮುಂದಾಗಬೇಕು ಎಂದು ಶಾಸಕ ಜೆ. ಎನ್. ಗಣೇಶ ಹೇಳಿದರು.
ಪಟ್ಟಣದ ಸಾಂಗತ್ರಯ ಪಾಠಶಾಲೆಯಲ್ಲಿ ನರೇಗಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಜಿಲ್ಲಾ ಸರ್ವೆಕ್ಷಣಾ ಎನ್. ಸಿ. ಡಿ ಘಟಕದ ಅಶ್ರಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದಿಂದ ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಮುದಾಯ ಕೇಂದ್ರದಲ್ಲಿ ಖಾಯಿಲೆಗೆ ಸಂಬಂಧಿಸಿದಂತೆ ಎಲ್ಲಾ ಯಂತ್ರೋಪಕರಣಗಳಿವೆ. ಅವುಗಳನ್ನು ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ವೈದ್ಯಾಧಿಕಾರಿ ಡಾ. ಹಾರಿಕಾ ಮಾತನಾಡಿ ಒತ್ತಡ ಜೀವನದ ಜೊತೆಗೆ ಕಲಬೆರಕೆ ಆಹಾರ ಸೇವಿಸುವುದರಿಂದ ರೋಗಗಳು ಕಾಣಿಸಿಕೊಳ್ಳುತ್ತವೇ ತಪ್ಪದೇ ವಾಕಿಂಗ್, ಯೋಗ, ಧ್ಯಾನ ಅಳವಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
120 ಜನರಿಗೆ ಉಚಿತ ತಪಾಸಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ.ತರುಣಕುಮಾರ, ಬಸವರಾಜ. ಶುಶ್ರೂಸಕಾಧಿಕಾರಿ ಡಿ.ದೇವಣ್ಣ, ನಂದಿನಿ, ಸಮುದಾಯ ಕೇಂದ್ರದಲ್ಲಿ ಸಿಂಬ್ಬದಿಯವರಾದ ಡಿ.ಎನ್.ಮಹ್ಮಮದ್, ಶೃತಿಕೋರಿ ಚಂದ್ರಶೇಖರ್ ಸೇರಿ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ