ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲಾ ಪ್ರಾರಂಭೋತ್ಸವ : ಸೀಳಿನವಸ್ತಿ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಣೆ

ಮಹಾರಾಷ್ಟ್ರ/ ಜತ್ತ : ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಶಾಲೆ, ಸೀಳಿನವಸ್ತಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಹಿರಿಯರಾದ ಬಸಣ್ಣಾ ಕಾತ್ರಾಳ ಅವರು ರಿಬ್ಬಿನ ಕತ್ತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿದ್ದಣ್ಣ ಸೀಳಿನ ಅಧ್ಯಕ್ಷತೆ ವಹಿಸಿದ್ದರು. ಸಂಗಣ್ಣ ಸೀಳಿನ್ ಹಾಗೂ ಪ್ರಕಾಶ್ ಕಾತ್ರಾಳ ಪ್ರತಿಮೆಗೆ ಪೂಜೆ ಸಲ್ಲಿಸಿದರು. ವೇದಿಕೆಯಲ್ಲಿ ಚಂದ್ರಶೇಖರ ತೇಲಿ, ಶುಭಾಷಚಂದ್ರ ಅಂಕಲಗಿ, ಭೀಮರಾಯ ತೇಲಿ, ಸುರೇಶ ಚೌಗುಲೆ, ಇಬ್ರಹಿಂ ಮುಲ್ಲಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷದ ಶುಭಾಶಯಗಳನ್ನು ಕೋರಿದರು.
ಆರಂಭದಲ್ಲಿ ಹೊಸದಾಗಿ ಪ್ರವೇಶ ಪಡೆದ ಮಕ್ಕಳನ್ನು ವಾದ್ಯ ಮೇಳದೊಂದಿಗೆ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಶೂ ವಿತರಣೆಯು ನಡೆಯಿತು. ಶಾಲೆಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ರಮೇಶ ಕನಮಡಿ ಎಲ್ಲ ಮಕ್ಕಳಿಗೆ ಉಪಹಾರ ಹಾಗೂ ಸಿಹಿ ವಿತರಿಸಿದರು.
ಪಾಲಕರು, ಗ್ರಾಮದ ಹಿರಿಯರು ಹಾಗೂ ಸಾರ್ವಜನಿಕರು ಈ ಉತ್ಸವದಲ್ಲಿ ಉಪಸ್ಥಿತರಿದ್ದರು.
ಮಲಿಕಜಾನ್ ಶೇಖ ಸ್ವಾಗತಿಸಿದರು. ಗುರುಬಸು ಬಿರಾದಾರ ನಿರೂಪಿಸಿದರೆ ಕಸ್ತೂರಿ ಮಾಂಗ ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!