ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೂಲಗಿತ್ತಿ ನರಸಮ್ಮ ಅವರ ಕಾಯಕ ಯುವಕರಿಗೆ ಪ್ರೇರಣೆ : ತಿಮ್ಮಣ್ಣ ನಾಯಕ

ಕೊಪ್ಪಳ / ಗಂಗಾವತಿ : ಸೂಲಗಿತ್ತಿ ನರಸಮ್ಮ ಅವರು ಕುಗ್ರಾಮದಲ್ಲಿ ಹುಟ್ಟಿ ತನ್ನ ಕಾಯಕದ ಮೂಲಕವೇ ದೆಹಲಿವರೆಗೂ ಹೆಸರು ಮಾಡಿದ್ದಾರೆ ಎಂದು ಗೃಹ ರಕ್ಷಕದಳದ ಘಟಕಾಧಿಕಾರಿ ತಿಮ್ಮಣ್ಣ ನಾಯಕ ಹೇಳಿದರು.
ಇಲ್ಲಿನ ಗಂಗಾವತಿ ನಗರದಲ್ಲಿರುವ ಗೃಹ ರಕ್ಷಕದಳದ ಕಛೇರಿ ಆವರಣದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಡುಬಡತನದಲ್ಲಿ ಹುಟ್ಟಿ ಬೆಳೆದು, ತಮ್ಮ ಅಜ್ಜಿಯಿಂದ ಕಲಿತ ಸೂಲಗಿತ್ತಿ ಕಸುಬಿನಿಂದ ಸಾವಿರಾರು ಹೆರಿಗೆ ಮಾಡಿಸಿ ತಾಯಿ, ಮಕ್ಕಳ ಜೀವ ಉಳಿಸಿದ್ದಾರೆ. ಅವರ ಕೊಡುಗೆ ಅನನ್ಯವಾಗಿದೆ. ಅವರ ಕಾಯಕ ನಿಷ್ಠೆಯು ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದರು. ಇಲ್ಲಿ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಪುಷ್ಪ ನಮನ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಗೃಹ ರಕ್ಷಕದಳದ ಮಾಜಿ ಘಟಕಾಧಿಕಾರಿ ಎಸ್.ಮೀರಾಸಾಬ್, ಸಿಬ್ಬಂದಿಗಳಾದ ಸಂಗಪ್ಪ ಹಿರೇಮನಿ, ಎನ್.ಮೊಹಮ್ಮದಲಿ, ಕೆ.ಸಂಜೀವಕುಮಾರ, ಎಸ್.ಚಂದ್ರಪ್ಪ, ಹನುಮೇಶ್, ಗಿರಿಮಲ್ಲ ಡಾಕ್ಟರ್, ಶಿವುಪುತ್ರಪ್ಪ ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ