ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊಸ ಸೇತುವೆ ನಿರ್ಮಿಸುವಂತೆ ಸಚಿವರಿಗೆ ಡಿಎಸ್‌ಎಸ್ ಮನವಿ

ಬಳ್ಳಾರಿ / ಕಂಪ್ಲಿ : ಶಿಥಿಲಗೊಂಡ ಕಂಪ್ಲಿ-ಗಂಗಾವತಿ, ತುಂಗಭದ್ರ ನದಿ ಸೇತುವೆ ಹೊಸದಾಗಿ ನಿರ್ಮಿಸುವಂತೆ ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಂಪ್ಲಿ ತಾಲೂಕು ಘಟಕದಿಂದ ಪಟ್ಟಣದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಭೇಟಿ ನೀಡಿದ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಇವರಿಗೆ ಮನವಿ ಪತ್ರ ಸಲ್ಲಿಸಿದರು.
ತಾಲೂಕು ಸಂಚಾಲಕ ಹೆಚ್.ಗುಂಡಪ್ಪ ಮಾತನಾಡಿ, ಕಂಪ್ಲಿ-ಗಂಗಾವತಿ, ತುಂಗಭದ್ರ ನದಿ ಸೇತುವೆಯು ಸುಮಾರು 65 ವರ್ಷದ ಹಳೆ ಸೇತುವೆಯಾಗಿದೆ. ಈಗಾಗಲೇ ಶಿಥಿಲಗೊಂಡಿದೆ. ಪ್ರತಿ ವರ್ಷದ ನೆರೆ ಹಾವಳಿಗೆ ನಿಲುಕಿ ಸೇತುವೆ ಶಿಥಿಲದೊಂದಿಗೆ ಬೀಳುವ ಪರಿಸ್ಥಿತಿಗೆ ಬಂದಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಬರುತ್ತದೆ ಮತ್ತು ತುಂಗಭದ್ರ ಡ್ಯಾಂನಿಂದ ಹೆಚ್ಚುವರಿಯಾಗಿ ಒಂದು ಲಕ್ಷಕ್ಕೂ ಕ್ಯೂಸೆಕ್ಸ್ ನೀರು ಬಿಟ್ಟರೆ, ಸೇತುವೆ ಮುಳುಗಿ, ಸಂಚಾರ ಕಡಿತವಾಗಿ ತಿಂಗಳುಗಟ್ಟಲೇ ಜನತೆಗೆ ತೊಂದರೆಯಾಗುತ್ತದೆ. ಇದರಿಂದ ಸುಮಾರು 30 ಕಿ.ಮೀ. ಸುತ್ತಿಬಳಸಿ ಸಂಚಾರ ಮಾಡಬೇಕಾಗಿದೆ. ಇಲ್ಲಿನ ರೈತರಿಗೆ, ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹಲವು ವರ್ಷಗಳಿಂದ ಹೊಸ ಸೇತುವೆ ಸೇವೆಗೆ ಆಗ್ರಹಿಸುತ್ತಾ ಬರಲಾಗಿದೆ. ಆದರೆ, ಈಗ ಖುದ್ದಾಗಿ ಸಚಿವರು ಬಂದಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ, ಅಗತ್ಯಕ್ರಮ ಕೈಗೊಂಡು, ಕಂಪ್ಲಿ-ಗಂಗಾವತಿ ತುಂಗಭದ್ರ ಸೇತುವೆಯನ್ನು ಹೊಸದಾಗಿ ನಿರ್ಮಿಸಲು ಕಾಮಗಾರಿಯನ್ನು ಆರಂಭಿಸುವ ನಿಟ್ಟಿನಲ್ಲಿ ಶೀಘ್ರವಾದ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನಾ ಸಂಚಾಲಕ ಹೆಚ್.ಮರಿಯಪ್ಪ, ಮುಖಂಡ ಎ.ಲಕ್ಷಿöಪತಿ, ಹೆಚ್.ಬಸವರಾಜ, ತಿಪ್ಪೇಸ್ವಾಮಿ, ಟಿ.ಹೊನ್ನೂರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ