ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ್; ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಪರಿಶೀಲನೆಗೆ ಹೋದ ಅಬಕಾರಿ ಪೇದೆ ಹಾಗೂ ಗೃಹ ರಕ್ಷಕ ಸಿಬ್ಬಂದಿ ಮೇಲೆ ಹಲ್ಲೆ

ಯಾದಗಿರಿ/ಗುರುಮಠಕಲ್: ನಿನ್ನೆ ಜೂ. 17 ರ ಸಾಯಂಕಾಲ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪಸಪೂಲ್ ತಾಂಡಾದಲ್ಲಿ ಖಚಿತ ಮಾಹಿತಿ ಅಧಾರದ ಮೇಲೆ ಮೇಲಾಧಿಕಾರಿಗಳ ಮೌಖಿಕ ಅದೇಶದಂತೆ ಪರಿಶೀಲನೆ ಮಾಡಲು ತೆರಳಿದ್ದ ಪರಶುರಾಮ ತಂದೆ ದೇಸು ಚವ್ಹಾಣ, ಅಬಕಾರಿ ಪೇದೆ ಮತ್ತು ಗೃಹ ರಕ್ಷಕ ಸಿಬ್ಬಂದಿಯಾದ ಭೀಮರಾಯ ತಂದೆ ಲಚಮಪ್ಪ ಕಣ್ಣೀರ ಆಶಾಪೂರ ಎನ್ನುವವರ ಮೇಲೆ ಹಲ್ಲೆ ಮಾಡಲಾಗಿದೆ.

ಕಳ್ಳಭಟ್ಟಿ ಸರಾಯಿ ತಯಾರಿ ಹಾಗೂ ಮಾರಾಟ ಮಾಡುತ್ತಿರುವ ಕುರಿತು ಆರೋಪಿ ಶಂಕ್ರಿಬಾಯಿ ಮನೆಗೆ ಪರಿಶೀಲನೆಗೆ ಹೋದ ಸಮಯದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಇಬ್ಬರ ಮೇಲೆ ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ನಮೂದಿಸಲಾಗಿದೆ.

ಹಲ್ಲೆಗೆ ಸಂಭಂದಿಸಿದ ಹಾಗೆ ಹಲ್ಲೆ ಮಾಡಿದ ಶಂಕ್ರಿಬಾಯಿ, ನಿಂಗಪ್ಪ, ಮೊಹನ್, ಸೋಮ್ಲಾ, ಶಾಂತಿಬಾಯಿ, ಬೀಚಿಬಾಯಿ ಎಂಬ 6 ಜನರ ಮೇಲೆ ಪ್ರಕರಣ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಳ್ಳಭಟ್ಟಿ ಸಾರಾಯಿ ತಯಾರಿಕೆ ಮತ್ತು ಮಾರಾಟ ಕಾನೂನು ಬಾಹಿರ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ, ಈ ಹಿನ್ನೆಲೆಯಲ್ಲಿ, ಪೊಲೀಸರು ಅಂತಹ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವುದು, ದಾಳಿ ಮಾಡಿ ಕಳ್ಳಭಟ್ಟಿ ಸಾರಾಯಿ ಮತ್ತು ಅದನ್ನು ತಯಾರಿಸಲು ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳುವಿಕೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಅಬಕಾರಿ ಇಲಾಖೆಯ ಅಧಿಕಾರಿಗಳ ಕರ್ತವ್ಯವಾಗಿದೆ ವಿಪರ್ಯಾಸವೆನ್ನುವಂತೆ ಅಧಿಕಾರಿ/ಪೇದೆಗಳ ಮೇಲೆ ಈ ರೀತಿಯ ಹಲ್ಲೆ ಕಾನೂನಿನ ಕುರಿತಾದ ಅರಿವು ಭಯ ಇಲ್ಲದಿರುವದು ಕಾಣಬರುತ್ತದೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!