ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪುರಸಭೆ ಆಡಳಿತ ಮಂಡಳಿಯವರ ಹಾಗೂ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಮುಖಂಡ ಶಬ್ಬೀರ್ ಹೆಚ್ ಹೇಳಿದರು.
ಅವರು ಗುರುವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈಗಾಗಲೇ ನಡುವಲ ಮಸೀದಿಯಿಂದ ಜೋಗಿ ಕಾಲುವೆರೆಗೂ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ರಸ್ತೆಗಳ ಅಭಿವೃದ್ಧಿ ಜತೆಗೆ ಪಟ್ಟಣವು ಸುಂದರವಾಗಿ ಕಾಣಲು ಸಾಧ್ಯವಾಗುತ್ತದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಅವಶ್ಯಕತೆ ಇದ್ದು, ಪುರಸಭೆ ಆಡಳಿತವು ಅಭಿವೃದ್ಧಿ ಮಾಡುವ ಭರವಸೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಪಟ್ಟಣದ ಅಭಿವೃದ್ಧಿ ಸಹಕಾರ ನೀಡಬೇಕಾಗಿದೆ. ಕೊಟ್ಟಾಲ್ ರಸ್ತೆ ಅಭಿವೃದ್ಧಿ ಪಡಿಸಿದಂತೆ, ಪುರಸಭೆ ವ್ಯಾಪ್ತಿಯ ಶಿಬಿರದಿನ್ನಿ (ಮಾರುತಿನಗರ)ವರೆಗೆ ಡಬಲ್ ರಸ್ತೆ ಮಾಡುವ ಮೂಲಕ ಅಭಿವೃದ್ಧಿ ಪಡಿಸಬೇಕೆಂದು ಮನವಿ ಮಾಡಿದರು.
ನಂತರ ಪ್ರಭಾರಿ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯ ಸಿ. ಆರ್. ಹನುಮಂತ, ಖಾದಾರಬಾಷಾ, ಸುಧಾಕರ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















