ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿಕರಿಗೆ ಬ್ಯಾಂಕ್ ಸೌಲಭ್ಯ ಅಗತ್ಯ : ಡಿ ವೈ ಎಸ್ ಪಿ ಟಿ. ಮಂಜುನಾಥ

ವಿಜಯನಗರ / ಬುಕ್ಕಸಾಗರ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದಲ್ಲಿ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಶಾಖೆಯನ್ನು ಪೊಲೀಸ್ ಇಲಾಖೆಯ ಡಿ ವೈ ಎಸ್ ಪಿ ಟಿ.ಮಂಜುನಾಥ ಇವರು ಶುಭ ಶುಕ್ರವಾರದಂದು ಉದ್ಘಾಟಿಸಿದರು.
ನಂತರ ಮಂಜುನಾಥ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ ಎರಡನೇ ಶಾಖೆಯಾಗಿ ಬ್ಯಾಂಕ್ ಆರಂಭಗೊಂಡಿದೆ. ವಿಶ್ವದಲ್ಲಿ ಒಂಬತ್ತು ಸಾವಿರ ಬರೋಡಾ ಬ್ಯಾಂಕ್‌ಗಳಿದ್ದು, ಕರ್ನಾಟಕದಲ್ಲಿ 700 ಶಾಖೆಗಳನ್ನು ಹೊಂದಿದೆ. ಗ್ರಾಹಕರಿಗೆ ಉತ್ತಮವಾಗಿ ಸೇವೆ ನೀಡುತ್ತಿದೆ. ಈ ಭಾಗದಲ್ಲಿ ಅತಿ ಹೆಚ್ಚಾಗಿ ಕೃಷಿಕರಿದ್ದು, ಮತ್ತು ಪ್ರವಾಸಿಗಳ ತಾಣವು ಕೂಡಾ ಹೌದು. ಆದ್ದರಿಂದ ಇಲ್ಲಿನ ಕೃಷಿಕರಿಗೆ ಬ್ಯಾಂಕ್ ಸೌಲಭ್ಯ ಅಗತ್ಯವಾಗಿದೆ. ಬ್ಯಾಂಕ್ ಸೌಲಭ್ಯದೊಂದಿಗೆ ಜನರು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಎಜಿಎ ಅಮರೇಶ ಮಾತನಾಡಿ, ಕೇಂದ್ರ ಸರ್ಕಾರದ ನಿರ್ದೇಶನದಂತೆ ದೇಶದಲ್ಲಿ ಸಾಕಷ್ಡು ಶಾಲೆಗಳನ್ನು ಸ್ಥಾಪಿಸುವ ಮೂಲಕ ಗ್ರಾಹಕರಿಗೆ ಒಳ್ಳೆಯ ಸೇವೆ ನೀಡಲಾಗುತ್ತಿದೆ. ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬುಕ್ಕಸಾಗರ ಗ್ರಾಮದಲ್ಲಿ ಶಾಖೆಯನ್ನು ಆರಂಭಿಸಲಾಗಿದೆ. ಗ್ರಾಹಕರ ಸ್ನೇಹಿಗಳಾಗಿ ಕಟ್ಟ ಕಡೆಯ ಗ್ರಾಹಕರಿಗೆ ಸೇವೆ ಒದಗಿಸಬೇಕು. ಬ್ಯಾಂಕ್ ಅಭಿವೃದ್ಧಿ ಜತೆಗೆ ಗ್ರಾಹಕರ ಅಭಿವೃದ್ಧಿ ಅಷ್ಟೇ ಮುಖ್ಯವಾಗಿದೆ. ಬ್ಯಾಂಕ್ ಗಳು ಸೂಪರ್ ಮಾರ್ಕೆಟ್ ಆಗಿವೆ. ಎಲ್ಲಾ ಸೌಲಭ್ಯಗಳು ಪ್ರತಿಯೊಬ್ಬರಿಗೂ ದೊರಕಲಿವೆ ಎಂದರು.
ಶಾಖೆ ವ್ಯವಸ್ಥಾಪಕ ಚಂದ್ರಶೇಖರ ಮಾತನಾಡಿ, ಈ ಭಾಗದ ಜನತೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬರೋಡಾ ಶಾಖೆ ಆರಂಭಿಸಲಾಗಿದೆ. ಜನತೆಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಸೇವೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಡಿಜಿಎಂ ಶ್ರೀಹರಿ, ಗ್ರಾಪಂ ಉಪಾಧ್ಯಕ್ಷೆ ರಾಮದೇವಿ, ಪಿಡಿಒ ರಾಜೇಶ್ವರಿ, ಮುಖಂಡ ವೀರಭದ್ರಪ್ಪ, ಸಿಬ್ಬಂದಿಗಳಾದ ವಿನೋದ, ಓಂಪ್ರಕಾಶ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಹಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!