ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂದಾಯ ಇಲಾಖೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಕರ್ನಾಟಕ ರಾಜ್ಯದ ಸರಕಾರಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಕಂದಾಯ ಭವನ, ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ದಿನಾಂಕ 19/06/2025ರಂದು ರಾಜ್ಯದ ಎಲ್ಲಾ ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಅನಿರ್ಧಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆಯಲ್ಲಿ ಗ್ರಾಮ ಸಹಾಯಕರ ರಾಜ್ಯಾಧ್ಯಕ್ಷರು ಮತ್ತು ಕಾರ್ಯದರ್ಶಿ ಅವರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಅಧ್ಯಕ್ಷರು, ತಾಲೂಕು ಕಾರ್ಯದರ್ಶಿ ಅವರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಕಂದಾಯ ಇಲಾಖೆಯ ಕಾರ್ಯದರ್ಶಿ ಅವರು ಸುನಿಲ್ ಕುಮಾರ್ ನಾಯಕ್ ಅವರು ಗ್ರಾಮ ಸಹಾಯಕರ ಮುಖ್ಯ ಬೇಡಿಕೆಗಳಾದ

1)ಗ್ರಾಮ ಸಹಾಯಕರನ್ನು ಡಿ, ದರ್ಜೆಗೆ ಸೇರಿಸಿ ಸೇವಾ ಭದ್ರತೆ ಒದಗಿಸಿ ಕನಿಷ್ಠ ವೇತನ 27,000 ಸಾವಿರ ಮಾಡುವುದು.
2)ಮರಣ ಹೊಂದಿದ ಗ್ರಾಮ ಸಹಾಯಕರಿಗೆ ಮತ್ತು ನಿವೃತ್ತಿ ಹೊಂದಿದ ಗ್ರಾಮ ಸಹಾಯಕರಿಗೆ ಹತ್ತು ಲಕ್ಷ ಹಿಡಿಗಂಟು ಕೊಡಬೇಕೆಂಬ ಈ ಎರಡು ಮುಖ್ಯ ಬೇಡಿಕೆಗಳ ಬಗ್ಗೆ ಸುನೀಲ ಕುಮಾರ ಅವರು ಆಶ್ವಾಸನೆ ಕೊಟ್ಟರು.
ತದ ನಂತರ ಕಾರ್ಯದರ್ಶಿಯವರಾದ ಮಾನ್ಯ ಕಲಾವತಿ ಅವರು ಸೇವಾ ಭದ್ರತೆ ವಿಚಾರವಾಗಿ ನಿಮ್ಮ ಬೇಡಿಕೆ ಸರಿ ಇದೆ, ನಿಮ್ಮ ಫೈಲ್ ನನ್ನ ಹತ್ತಿರ ಇದೆ ವಾರದೊಳಗಾಗಿ ನಿಮ್ಮ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿ ನಂತರ ಎಲ್ಲಾ ಗ್ರಾಮ ಸಹಾಯಕರು ಮಾನ್ಯ ಕಲಾವತಿ ಅವರ ಮಾತಿಗೆ ಗೌರವಿಸಿ ಮತ್ತು ನಮ್ಮ ರಾಜ್ಯಾಧ್ಯಕ್ಷರು H.N. ದೇವರಾಜ್ ಅವರ ಮಾತಿಗೆ ಮುಷ್ಕರವನ್ನು ಹಿಂಪಡೆದರು.

ವರದಿ ಉಸ್ಮಾನ್ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!