ಕುಕನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಗಮಿಸಿದ ಡಾ. ಜಿ.ಪರಮೇಶ್ವರ್ ಗೃಹ ಸಚಿವರು, ಹೆಚ್. ಕೆ.ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಕರ್ನಾಟಕ ಸರಕಾರ ಇವರಿಗೆ ಪರಿಶಿಷ್ಟ ಪಂಗಡದ ಅವೈಜ್ಞಾನಿಕ ಒಳ ಮೀಸಲಾತಿಯನ್ನು ರದ್ದು ಪಡಿಸಬೇಕು, ಇಲ್ಲವೇ ನಮ್ಮ ಬಂಜಾರ,ಭೋವಿ, ಕೊರಚ,ಕೊರಮ ಜನಾಂಗದವರಿಗೆ ಶೇಕಡಾ 6% ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಯಿತು.
ಸುರೇಶ ಬಳೂಟಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋರ ಸೇನಾ ಕರ್ನಾಟಕ ಪತ್ರಿಕೆಯೊಂದಿಗೆ ಮಾತನಾಡಿ ಸಮಸ್ತ ಬಂಜಾರ, ಭೋವಿ,ಕೊರಚ, ಕೊರಮ ಸಮಾಜದ ಸರ್ವ ನಾಗರಿಗರು ತಮ್ಮ ಸರಕಾರ ಪರಿಶಿಷ್ಟ ಪಂಗಡದಲ್ಲಿ ಒಳ ಮೀಸಲಾತಿ ಮಾಡುತ್ತಿರುವದು ಸರಿಯಷ್ಟೆ. ಆದರೆ ಇದನ್ನು ಮಾಡುವಾಗ ನ್ಯಾ.ನಾಗಮೋಹನ ದಾಸ್ ವರದಿ ತಯಾರಿಸಲು ಜಾತಿ ಗಣತಿ ಕಾರ್ಯವನ್ನು ಮಾಡಿರುತ್ತಿರಿ.ಇದು ಸಮರ್ಪಕವಾಗಿ, ವೈಜ್ಞಾನಿಕವಾಗಿ ನ್ಯಾಯವಾಗಿ ನಡೆದಿರುವುದಿಲ್ಲ, ನಮ್ಮ ಜನಾಂಗದವರು ಅನಕ್ಷರಸ್ಥರು ಮುಗ್ಧರು ಇರುವದರಿಂದ ಹಾಗೂ ನಮ್ಮ ಹತ್ತಿರ ಸರಿಯಾದ ದಾಖಲೆಗಳು ಇಲ್ಲದೇ ಇರುವದರಿಂದ ನಮ್ಮ ಜನಾಂಗಗಳ ನೋಂದಣಿ ಸರಿಯಾಗಿ ಆಗಿರುವುದಿಲ್ಲ. ಈ ಸಮಯದಲ್ಲಿ ಕೆಲವೊಂದಿಷ್ಟು ಜನ ಹೊಟ್ಟೆ ಪಾಡಿಗಾಗಿ ದುಡಿಯಲು ಗುಳೆ ಹೋಗಿರುವುದರಿಂದ ಈ ಜಾತಿಗಣತಿಯಿಂದ ಹೊರಗುಳಿದಿದ್ದಾರೆ. ಆದ ಕಾರಣ ಈ ಒಳ ಮೀಸಲಾತಿಯನ್ನು ಇಲ್ಲಿಗೆ ಬಿಡುವದು ಸೂಕ್ತವೆಂದು ನಮ್ಮ ಅಭಿಪ್ರಾಯ ಹಾಗೊಂದು ವೇಳೆ ಮಾಡಲೇಬೇಕೆಂಬ ಇಚ್ಛೆ ನಿಮಗಿದ್ದರೆ ಒಳಮೀಸಲಾತಿಯಲ್ಲಿ ನಮ್ಮ ಈ ನಾಲ್ಕು ಸಮಾಜಗಳಿಗೆ ಶೇಕಡಾ 6% ರಷ್ಟನ್ನು ನೀಡಿದರೆ ನಮಗೆ ಅನುಕೂಲವಾಗುತ್ತದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ನಮಗೆ ಉಪಕಾರ ಮಾಡುತ್ತೀರೆಂದು ತಮ್ಮಲ್ಲಿ ಕಳಕಳಿಯ ವಿನಂತಿ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮೇಘರಾಜ ಬಳಿಗೇರಿ, ಯಮನೂರಪ್ಪ ಕಟ್ಟಿಮನಿ, ಪ್ರಕಾಶ ಬಳಿಗೇರಿ, ಹನಮಂತ ಚವ್ಹಾಣ, ಪ್ರಾಣೇಶ ನಾಯಕ,ರಾಘವೇಂದ್ರ ಬಳಗೇರಿ, ಲಿಂಬಣ್ಣ ನಾಯಕ,ಚೇತನ ಬಳಿಗೇರಿ,ದಿಲೀಪ ಕಾರಭಾರಿ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.
- ಕರುನಾಡ ಕಂದ



















