ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸುಮಾರು 10.11 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ : ಸುಮಾರು 10.11 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು, ಶಾಲಾ ಕೊಠಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಸೋಮವಾರ ಅಡಿಗಲ್ಲು ಭೂಮಿ ಸಲ್ಲಿಸಿದರು.
ತಾಲೂಕಿನ ಹಂಪಾದೇವನಹಳ್ಳಿ ಗ್ರಾಪಂಯ ಜವುಕು ಗ್ರಾಮದಲ್ಲಿ 2024-25ನೇ ಸಾಲಿನ ಜೆಜೆಎಂ ಯೋಜನೆಯಡಿ ಸುಮಾರು 994 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಜವುಕು ಸೇರಿದಂತೆ ಇತರೆ ಗ್ರಾಮಗಳಿಗೆ ಕುಡಿಯುವ ನೀರಿನ ಕೆರೆ ಹಾಗೂ ಪೈಪ್‌ಲೈನ್‌ದೊಂದಿಗೆ ನಳ ಅಳವಡಿಕೆ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಗಣೇಶ ಅವರು, ಇಲ್ಲಿನ ಜವುಕು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಗೆ ಕುಡಿಯುವ ನೀರಿನ ಅವಶ್ಯಕತೆ ಇದೆ. ಆದ್ದರಿಂದ ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದು, ಇಲ್ಲಿನ ಕುಡಿಯುವ ನೀರಿನ ಕೆರೆ ಅಭಿವೃದ್ಧಿಪಡಿಸಲಾಗುತ್ತದೆ. ಕೆರೆಯಲ್ಲಿ ಸಮತಟ್ಟು, ಸೀಟ್ ನಿರ್ಮಾಣದೊಂದಿಗೆ ನೀರು ನಿಲ್ಲುವಂತೆ ಮಾಡಿ, ಕೆರೆಯಲ್ಲಿ ಎಲ್‌ಎಲ್‌ಸಿ ಕಾಲುವೆ ಮೂಲಕ ಪೈಪ್‌ಲೈನ್ ಅಳವಡಿಸಿ, ನೀರು ತುಂಬಿಸಿ, ಜನತೆಗೆ ಕಲ್ಪಿಸಲಾಗುವುದು. ಈಗಾಗಲೇ ಉಪ್ಪಾರಹಳ್ಳಿ, ದೇವಲಾಪುರ ಕೆರೆ ಅಭಿವೃದ್ಧಿಪಡಿಸಿದಂತೆ ಈಗ ಜವುಕು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಈ ಭಾಗದಲ್ಲಿ ಸಾಕಷ್ಟು ಕಡು ಬಡವರಿದ್ದು, ಮುಂದಿನ ದಿನದಲ್ಲಿ ಎಸ್ ಸಿ, ಎಸ್ ಟಿ ಬಸವ ಯೋಜನೆಯಡಿ ಹಾಗೂ ವಿವಿಧ ಯೋಜನೆಗಳ ಪ್ರತಿ ಗ್ರಾಪಂ ಮಟ್ಟದಲ್ಲಿ 220 ಮನೆ ನೀಡುವ ಗುರಿ ಹೊಂದಲಾಗಿದೆ. ಬಡ ಜನತೆಗೆ ನಿವೇಶನ ಜತೆಗೆ ಸೂರು ಒದಗಿಸಿಕೊಡುವ ಭರವಸೆ ನೀಡಿದರು.
ನಂತರ ಮೆಟ್ರಿ ಗ್ರಾಪಂಯ ಉಪ್ಪಾರಹಳ್ಳಿ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ(ಮೈಕ್ರೋ ಪ್ರಾಜೆಕ್ಟ್) ಯೋಜನೆಯಡಿ ಸುಮಾರು 17 ಲಕ್ಷ ವೆಚ್ಚದಲ್ಲಿ ಸ.ಹಿ.ಪ್ರಾ ಶಾಲೆಯ 1 ಶಾಲಾ ಕೊಠಡಿಗೆ ಅಡಿಗಲ್ಲು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸರಾವ್, ಮೆಟ್ರಿ ಗ್ರಾಪಂ ಅಧ್ಯಕ್ಷೆ ನಾಗಮ್ಮ, ಸದಸ್ಯ ಮೆಟ್ರಿ ಗಿರೀಶ, ಮುಖ್ಯಗುರು ಮಲ್ಲಿಕಾರ್ಜುನ, ಇಸಿಒ ರೇವಣ್ಣ, ಎಸ್ಟಿಎಂಸಿ ಅಧ್ಯಕ್ಷೆ ಲಕ್ಷ್ಮೀ, ಜವುಕು ಗ್ರಾಮದ ಮುಖಂಡ ಮಲ್ಲಿಕಾರ್ಜುನ, ಪಿಡಿಒ ಭೀರಲಿಂಗ, ಶಿವನಗೌಡ, ಜನಪ್ರತಿನಿಧಿಗಳು, ಮುಖಂಡರು, ಸಹ ಶಿಕ್ಷಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!