ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ಮಿಕ ಕಾನೂನುಗಳಲ್ಲಿ ಮಾಲೀಕರ ಪರವಾದ ತಿದ್ದುಪಡಿಗಳನ್ನು ಮಾಡದಂತೆ ಆಗ್ರಹ

ಬಳ್ಳಾರಿ / ಕಂಪ್ಲಿ : ಕಾರ್ಮಿಕ ಕಾನೂನುಗಳಲ್ಲಿ ಬಂಡವಾಳಿಗರ ಪರವಾದ ತಿದ್ದುಪಡಿಗಳನ್ನು ಮಾಡದಂತೆ ಆಗ್ರಹಿಸಿ, ಪ್ರಗತಿಪರ ಮತ್ತು ರೈತಪರ ಹೋಗಾಟಗಾರರ ಸಂಘದಿಂದ ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ತಹಶೀಲ್ದಾರ್ ಮಂಜುನಾಥ ನಾಯಕಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.

ನಂತರ ಮುಖಂಡ ಕರಿಯಪ್ಪ ಗುಡಿಮನಿ ಮಾತನಾಡಿ, ‘ರಾಸ್ ಆಫ್ ಡೂಯಿಂಗ್ ಬ್ಯುಸಿನೆಸ್” ಎಂಬ ನೆಪದಲ್ಲಿ ರಾಜ್ಯ ಸರ್ಕಾರದ ಮೇಲೆ ಕಾರ್ಪೊರೇಟ್ ಬಂಡವಾಳಿಗರು ಹಾಗು ಕೇಂದ್ರ ಸರ್ಕಾರವು ಹಲವು ರೀತಿಯ ಒತ್ತಡಗಳನ್ನು ಹೇರುವ ಮೂಲಕ ರಾಜ್ಯದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತಿರುವುದು ಬಹಿರಂಗವಾಗಿದೆ. ಈ ತಿದ್ದುಪಡಿಗಳು ಜಾರಿಯಾದಲ್ಲಿ ರಾಜ್ಯದ ಬಹುಸಂಖ್ಯೆಯ ಸಂಘಟಿತ, ಅಸಂಘಟಿತ ಕಾರ್ಮಿಕರು ಹಾಗೂ ದುಡಿಯುವ ಜನ ಕಾನೂನುಗಳ ರಕ್ಷಣೆಯಿಂದ ಹೊರಗಾಗುತ್ತಾರೆ. ಹಾಗೂ ಈಗಾಗಲೇ ಉದ್ಯೋಗದಲ್ಲಿರುವ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಸಂಭವಗಳು ಹೆಚ್ಚಾಗುತ್ತದೆ. ಕನಿಷ್ಟ ವೇತನವನ್ನು ಅವೈಜ್ಞಾನಿಕವಾಗಿ ನಿಗಧಿಪಡಿಸುವುದು. ಕೈಗಾರಿಕಾ ವಿವಾದಗಳನ್ನು ಇತ್ಯರ್ಥ ಮಾಡಲು ಕಾಲಹಗರಣ ಮಾಡುವುದು. ಹೀಗೆ ಹಲವು ಸಮಸ್ಯೆಗಳು ಕಾರ್ಮಿಕರ ಹೊಟ್ಟೆ ಮೇಲೆ ಬರೆಯುವುದು ಸತ್ಯ. ಆದ್ದರಿಂದ ಕಾರ್ಮಿಕ ಕಾನೂನುಗಳಲ್ಲಿ ಬಂಡವಾಳಿಗರ ಪರವಾದ ತಿದ್ದುಪಡಿಗಳನ್ನು ಮಾಡದಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಸಂತರಾಜ ಕಹಳೆ, ಬಂಡಿ ಬಸವರಾಜ, ನೀಲಪ್ಪ ಪೇಂಟರ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!