ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ರೇವಣಸಿದ್ದೇಶ್ವರ ಗೆಳೆಯರ ಬಳಗದ ವತಿಯಿಂದ ಶ್ರೀ ಶಿವರಾಜ್ ಪಾಟೀಲ್ ಗೋಣಿಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯವರಿಗೆ ಅಭಿನಂದನಾ ಸಮಾರಂಭ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮುಕರಂಬಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಮಠದಲ್ಲಿ ಶ್ರೀ ರೇವಣಸಿದ್ದೇಶ್ವರ ಗೆಳೆಯರ ಬಳಗದ ವತಿಯಿಂದ ಶ್ರೀಯುತ ಶ್ರೀ ಶಿವರಾಜ ಪಾಟೀಲ್ ಗೊಣಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಇವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಂಡು ಅವರನ್ನು ಸನ್ಮಾನಿಸಲಾಯಿತು. ನಮ್ಮ ದೇಶದ ಬೆನ್ನೆಲುಬು ಅಂದರೆ ರೈತ. ರೈತರು ಹಳ್ಳಿಯಲ್ಲಿ ಸರಳ ಮತ್ತು ಪ್ರಾಮಾಣಿಕ ಜೀವನವನ್ನು ನಡೆಸುತ್ತಾರೆ. ರೈತರು ಹೊಲದಲ್ಲಿ ದುಡಿಯುತ್ತಾರೆ, ಅವರು ಪ್ರತಿದಿನ ಬೆಳಿಗ್ಗೆ ಬೇಗನೆ ಎದ್ದು ತಮ್ಮ ಕಾಯಕವನ್ನು ಪ್ರಾರಂಭಿಸುತ್ತಾರೆ ರೈತರು ಹೊಲದಲ್ಲಿ ಆಹಾರವನ್ನು ಬೆಳೆಸಿ ನಮಗೆಲ್ಲರಿಗೂ ನೀಡುತ್ತಾರೆ. ಅದಕ್ಕಾಗಿ ಶ್ರೀ ಶಿವರಾಜ್ ಪಾಟೀಲ್ ಗೋಣಿಗಿ ರವರು ರೈತರ ಯಾವುದೇ ಸಮಸ್ಯೆಗಳನ್ನು ಬೆನ್ನೆಲುಬಾಗಿ ನಿಂತು ಪರಿಹಾರ ಕೊಂಡುಕೊಳ್ಳಲು ಯಶಸ್ವಿ ಆಗಬೇಕೆಂದು ಈ ಸಂದರ್ಭದಲ್ಲಿ ವೀರಣ್ಣ ಗಂಗಾಣಿ ತಾಲೂಕ ರೈತ ಸೇನೆ ಅಧ್ಯಕ್ಷರು ಮಾತನಾಡಿದರು. ಈ ಸಂದರ್ಭದಲ್ಲಿ ಆ ಗ್ರಾಮಗಳ ಗೆಳೆಯರ ಬಳಗದವರು ರಟಕಲ್, ಮುಕರಂಬಿ,ಚಂದನಕೇರ, ಬೇಡಸೋರ,ಗೊಣಗಿ, ಮಾವಿನಸುರ,ಅರಣಕಲ್,ರೇವಗಿ, ಕಂದಗೋಳ ಹೊಳಗೇರಾ,ಮತ್ತು ಇನ್ನೂ ಅನೇಕ ಗ್ರಾಮದ ರೈತರು ಭಾಗಿಯಾಗಿದ್ದರು.
ವೇದಿಕೆಯನ್ನು ಉದ್ದೇಶಿಸಿ ರಟಕಲ್ ವಿರಕ್ತ ಮಠದ ಪೂಜ್ಯ ಶ್ರೀ ನೀಲಕಂಠ ದೇವರು ಮಾತನಾಡಿದರು. ಚಂದ್ರಶೇಖರಯ್ಯ ಸ್ವಾಮಿ ಮುಕರಂಬಿ ದತ್ತತ್ರಾಯ ರಾಯಗೊಳ ಮಾತನಾಡಿದರು. ಚಂದನಕ್ಕೆರ,ರೈತ ಮುಖಂಡರುಗಳಾದ ಬಸವರಾಜ ಪಾಟೀಲ್ ಬೆಡ್ಸೂರ ಶಿವರಾಜ ಚೌಕ ಮಂಜು ಪಾಟೀಲ್ ಕಂದಗೋಳ ಮತ್ತು ಇನ್ನೂ ಅನೇಕ ರೈತ ಮುಖಂಡರು ಭಾಗಿಯಾಗಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!