ಬಾಗಲಕೋಟೆ :ನಿನ್ನೆ ಚರಂತಿಮಠದ ಕಲ್ಯಾಣ ಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಾಗರೀಕರ ವೇದಿಕೆ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಸ್ಥಿತಿ, ಭಾರತ ದೇಶದ ಪ್ರಜಾಪ್ರಭುತ್ವ ಕಗ್ಗೊಲೆಯಾದ 50 ನೇ ವರ್ಷದ ಕರಾಳ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರಾಗಿ ಆಗಮಿಸಿದ ಶ್ರೀ ಚಕ್ರವರ್ತಿ ಸೂಲಿಬೆಲೆ ತುರ್ತು ಪರಿಸ್ಥಿತಿಯ ಕರಾಳ ದಿನಗಳ ನೈಜ ಕಹಿ ಘಟನೆಗಳನ್ನು ಎಳೆ ಎಳೆಯಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ಶಾಸಕರಾದ ನಾಡೋಜ ಶ್ರೀ ಜಗದೀಶ ಗುಡಗುಂಟಿ, ಮಾಜಿ ಶಾಸಕರುಗಳಾದ ಶ್ರೀ ವೀರಣ್ಣ ಚರಂತಿಮಠ, ಶ್ರೀ ಎಂ.ಕೆ. ಪಟ್ಟಣಶೇಟ್ಟಿ, ಶ್ರೀಕಾಂತ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.
ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ



















