ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಬಳ್ಳಾರಿ/ ಕಂಪ್ಲಿ : ಡಾ. ಫ. ಗು. ಹಳಕಟ್ಟಿ ಜನ್ಮದಿನದ ಹಿನ್ನೆಲೆಯಲ್ಲಿ ಬುಧವಾರ ತಹಸಿಲ್ ಕಚೇರಿ ಸಭಾಂಗಣದಲ್ಲಿ ವಚನ ಸಾಹಿತ್ಯ ಸಂರಕ್ಷರ ದಿನ ಆಚರಿಸಲಾಯಿತು.
ತಹಶೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ ವಚನಗಳ ಉಳಿವಿಗೆ ಶ್ರಮಿಸಿದ್ದ ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದರು.

ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಡಾ. ಬಿ. ಸುನಿಲ್ “ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಹಾಗೂ . ಫ. ಗು. ಹಳಕಟ್ಟಿಯವರ ಪಾತ್ರ ಹಾಗು ವಚನ ಸಾಹಿತ್ಯ ಕುರಿತು ಉಪನ್ಯಾಸ ನೀಡಿ ಮಾತನಾಡಿ ವಿಶ್ವದ ಸಾಹಿತ್ಯ ಮತ್ತು ಧರ್ಮದಲ್ಲಿ ಕಾಣದ ವೈಜ್ಞಾನಿಕ, ಧಾರ್ಮಿಕ, ಸಾಮಾಜಿಕ ಮೌಲ್ಯಗಳು ವಚನ ಸಾಹಿತ್ಯದಲ್ಲಿವೆ. ವಚನಗಳನ್ನು ಮುಂದಿನ ಪೀಳಿಗೆ ಉಳಿಸುವ ದೃಷ್ಟಿಯಿಂದ ಅಧ್ಯಯನ ಅಗತ್ಯ’ ವಚನ ಪಿತಾಮಹ ಹಳಕಟ್ಟಿ ಅವರು ಬಹುಮುಖ ಪ್ರತಿಭೆ ಉಳ್ಳವರು. ಅವರ ಬದುಕಿನ ಕೊನೆವರೆಗೂ ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಪ್ರಸಾರ ಮಾಡಿದ್ದಾರೆ. ವಚನ ಸಾಹಿತ್ಯದ ಬೆಳಕು ಜಗತ್ತಿಗೆ ಪಸರಿಸಿದ್ದಾರೆ. ಅವರಿಂದ ವಿಶ್ವ ಮಾನ್ಯತೆ ಪಡೆದ ವಚನಗಳು ದೊರೆತ್ತಿವೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕ ತಹಶೀಲ್ದಾರ್ ಆಡಳಿತದ ಸಿಬ್ಬಂದಿ ವರ್ಗದವರು ಹಾಗೂ ಕನ್ನಡ ಹಿತರಕ್ಷಕ ಸಂಘದ ಗೌರಾವಾಧ್ಯಕ್ಷ ಕ.ಮ. ಹೇಮಯ್ಯಸ್ವಾಮಿ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪ್ರಕಾಶ್, ಕಾರ್ಯಾಧ್ಯಕ್ಷ ಬಂಗಿ ದೊಡ್ಡ ಮಂಜುನಾಥ, ಪ್ರಮುಖರಾದ ಎಸ್.ಡಿ.ಬಸವರಾಜ, ಬಿ.ಎಂ.ರುದ್ರಯ್ಯ, ಪಾಮಯ್ಯ ಶರಣರು, ಎಲಿಗಾರ್ ವೆಂಕಟರೆಡ್ಡಿ, ಸಜ್ಜೆದ ವೀರಭದ್ರಪ್ಪ, ನೀಲಕಂಠಪ್ಪ, ಅಶೋಕ್ ಕುಕನೂರು ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!