ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮದಿಂದ ಮೊಹರಂ ಹಬ್ಬ ಆಚರಣೆ: ಹುಲಿ ವೇಷ ತೊಟ್ಟು ಕುಣಿದು ಹರಕೆ ತೀರಿಸಿದ ಭಕ್ತರು

ಬಳ್ಳಾರಿ / ಕಂಪ್ಲಿ : ನಗರ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದ ವಿವಿಧ ಕಡೆಗಳಲ್ಲಿ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ಹುಲಿ ವೇಷಧಾರಿಗಳ ಕುಣಿತದ ಮೆರವಣಿಗೆ ನೋಡಲು ಎರಡು ಕಣ್ಣುಗಳು ಸಾಲದು.

ಹೌದು, ಹರಕೆ ಹೊತ್ತ ನೂರಾರು ಮಕ್ಕಳು ಹಾಗೂ ಯುವಕರು ಹುಲಿ ವೇಷ ಹಾಕಿಕೊಂಡು ಕುಣಿದು ಹರಕೆ ತೀರಿಸುವುದನ್ನು ನೋಡುವುದೇ ಒಂದು ಖುಷಿ. ಹಲಗೆ ಸೌಂಡ್​ಗೆ ಹುಲಿ ವೇಷಧಾರಿಗಳು ಸಖತ್ ಸ್ಟೆಪ್ ಹಾಕುವುದು, ಜನ ಕೇಕೆ, ಸಿಳ್ಳೆ ಹೊಡೆಯುವುದು. ನೋಡಲು ತುಂಬಾ ಚೆನ್ನಾಗಿರುತ್ತದೆ. ಸಾರ್ವಜನಿಕರು ಸಂತೋಷಕ್ಕಾಗಿ ಹಣವನ್ನು ಕುಣಿತದವರಿಗೆ ನೀಡುತ್ತಾರೆ. ತಮಗೆ ಕಷ್ಟಗಳು ಬಂದಾಗ ಬೇಡಿಕೊಂಡಿದ್ದು, ಹರಕೆ ಕಟ್ಟಿಕೊಂಡಿದ್ದೆವು. ಕಷ್ಟಗಳು ದೂರವಾಗಿ, ಬೇಡಿಕೆಗಳು ಇಷ್ಟಾರ್ಥಗಳು ಈಡೇರಿದ್ದರಿಂದ ಪ್ರತಿ ವರ್ಷ ಹುಲಿ ವೇಷ ಹಾಕಿ ಕುಣಿದು ನಮ್ಮ ಹರಕೆ ತೀರುಸುತ್ತೇವೆ ಅಂತಿದ್ದಾರೆ ಹುಲಿ ವೇಷಧಾರಿಗಳು. ಹಿಂದೂ- ಮುಸ್ಲಿಂ ಭಾವೈಕ್ಯತೆ ಸಂದೇಶ ಸಾರುವ ಮೊಹರಂ ಹಬ್ಬವನ್ನು ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸುತ್ತಿರುವುದು ತುಂಬಾ ಖುಷಿ ವಿಚಾರವಾಗಿದೆ.

ಮೊಹರಂ ಹಬ್ಬದ ಕತ್ತಲು ರಾತ್ರಿ ಈ ದಿನದಂದು ರಾತ್ರಿ ಪಂಜಾದ (ದೇವರು) ಮುಜುವಾರರವರು ಕೆಂಡವನ್ನು ತುಳಿದು ಮಸೀದಿಗಳಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಂಜಗಳ ಮೆರವಣಿಗೆ ನಡೆಸುತ್ತಾರೆ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!