ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಶ್ರೀರಾಮಚಂದ್ರಪುರ ಕ್ಯಾಂಪ್ ನಲ್ಲಿ ನೆಲೆಸಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಶುಕ್ರವಾರ ಶಾಸಕ ಜೆ. ಎನ್. ಗಣೇಶ ಸಮ್ಮುಖದಲ್ಲಿ ವಿತರಿಸಲಾಯಿತು.
ನಂತರ ಶಾಸಕ ಜೆ. ಎನ್. ಗಣೇಶ ಮಾತನಾಡಿ ಸುಮಾರು ವರ್ಷಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹಕ್ಕು ಪತ್ರದ ಸಮಸ್ಯೆ ಕಾಡುತ್ತಿತ್ತು. ಆದರೆ ಈಗ ಕಾಲ ಕೂಡಿ ಬಂದಿದ್ದು, ಇಲ್ಲಿನ 133 ಕುಟುಂಬಗಳ ಪೈಕಿ ಈಗ ಸಾಕೇಂತಿಕವಾಗಿ 50 ಕುಟುಂಬಗಳಿಗೆ ಹಕ್ಕು ಪತ್ರ ನೀಡಿದ್ದು ಇನ್ನುಳಿದ ಹಕ್ಕು ಪತ್ರಗಳನ್ನು ಕೆಲವೇ ದಿನದಲ್ಲಿ ವಿತರಿಸಲಾಗುವುದು ಎಂದರು.
ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಸುಂದರವಾಗಿರಬೇಕು ಈ ನಿಟ್ಟಿನಲ್ಲಿ ಹಲವು ವರ್ಷಗಳ ಕನಸು ನನಸಾದಂತಾಗಿದೆ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡೆಯಿರಿ ಎಂದರು.
ತಹಶೀಲ್ದಾರ್ ಮಂಜುನಾಥ ನಾಯ್ಕ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾ. ಪಂ ಅಧ್ಯಕ್ಷೆ ಶಾರದಮ್ಮ, ಕುರುಗೋಡು ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜನ, ಕಂದಾಯ ಅಧಿಕಾರಿ ಆರ್. ಐ ಜಗದೀಶ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ಸ್ಥಳೀಯ ಮುಖಂಡರು ಸೇರಿದಂತೆ ಅನೇಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ



















