ಹನೂರು: ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಉರುಳಿ ಬಿದ್ದಿದ್ದು 15 ಜನರಿಗೆ ಗಾಯಗಳಾಗಿವೆ.
ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಎರಡನೇ ತಿರುವು ಬಳಿ ನಿಯಂತ್ರಣಕ್ಕೆ ಸಿಗದೇ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಮಹದೇಶ್ವರ ಬೆಟ್ಟ ಸರ್ಕಾರಿ ಆರೊಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
ವರದಿ:ಉಸ್ಮಾನ್ ಖಾನ್.
