ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾರಾಪೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಮೊಹರಂ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನ ಧಪನ ಕಾರ್ಯಕ್ರಮ ವಿಜೃಂಭಣೆಯಿಂದ ಕಂಡುಬಂತು. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಆಲಾಯಿ ದೇವರ ಆರಾಧನೆ ಜೋರಾಗಿತ್ತು, ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಿದ್ದ ಲಾಲಸಾಬ ದೇವರು ರವಿವಾರ ಬೆಳಗ್ಗೆ ಯೇ ಸವಾರಿಗಳು ಭಕ್ತರ ಮನೆಗಳಿಗೆ ಹೋಗಿಬಂದು ಭಕ್ತರು ಶ್ರದ್ಧಾ ಭಕ್ತಿಯಿಂದ ದೇವರಿಗೆ ನಮಿಸಿ ಇಷ್ಟಾರ್ಥ ಪೂರೈಸುವಂತೆ ಬೇಡಿಕೊಂಡರು. ಸಕ್ಕರೆ ಹೂವಿನ ಹಾರ ನ್ಯೆವೇದ್ಯ ಅರ್ಪಿಸಿದರು. ಕೊನೆಯ ದಿನವಾದ ಕಾರಣ ಹಿಂದೂ ಮುಸ್ಲಿಂ ಸಮುದಾಯದವರು ಧರ್ಮ ಬೇದ ಮರೆತು ಮೊಹರಂ ಹಬ್ಬವನ್ನು ಭಾವೈಕ್ಯತೆಯಿಂದ ಅದ್ದೂರಿಯಾಗಿ ಆಚರಿಸಿ ಸಾಮರಸ್ಯ ಮೆರೆದರು. ತಾರಾಪುರ ಗ್ರಾಮದಲ್ಲಿ ನಡೆಯುವ ಮೊಹರಂ ಹಬ್ಬದಲ್ಲಿ ಆಲಾಯಿ ದೇವರ ಪಂಜಾಗಳನ್ನು ಹೊರುವ ಸಂಪ್ರದಾಯ ಹಿಂದೂ ಮುಸ್ಲಿಂ ಸಮುದಾಯ ಎಲ್ಲರೂ ಸೇರಿ ಆಚರಿಸುತ್ತಿದ್ದಾರೆ ಈ ಆಲಾಯಿ ದೇವರಿಗೆ ತಾರಾಪುರ ಗ್ರಾಮದ ಗೌಡರ ಮನೆತನದವರಾದ ಶಂಕರಗೌಡ ಶರಣಗೌಡ ಪಾಟೀಲ ಎಂಬುವವರು ಪ್ರತಿ ವರ್ಷ ಆಲಾಯಿ ದೇವರಿಗೆ ಅಲಂಕಾರ ಮಾಡಿ ಪೂಜೆ ಪುನಸ್ಕಾರ ನ್ಯೆವೇದ್ಯ ಮಾಡಿದ ಬಳಿಕ ಚಾಲನೆ ನೀಡುವ ಮೂಲಕ ಆಚರಣೆ ಮಾಡಲಾಗುತ್ತದೆ.
ಇದೇ ಸಂದರ್ಭದಲ್ಲಿ ಸಾತುಗೌಡ ಬಿರಾದಾರ ಪಿಕೆಪಿಎಸ್ ಸದಸ್ಯರು ಕಡಣಿ ಮಾತನಾಡಿ ಹಿಂದೂ ಮುಸ್ಲಿಂ ಬಾಂಧವ್ಯ ಮರೆತು ತಾರಾಪುರ ಗ್ರಾಮದಲ್ಲಿ ಬಹು ವಿಜೃಂಭಣೆಯಿಂದ ಮೊಹರಂ ಆಚರಣೆ ಮಾಡುತ್ತೇವೆ ಎಂದು ಹೇಳಿದರು.
ತಾರಾಪುರ ಗ್ರಾಮದ ಮೊಹರಂ ಚರಣೆಯಲ್ಲಿ ಊರಿನ ಹಿರಿಯರು ಮಹಿಳೆಯರು, ಯುವಕರು ಭಾಗಿಯಾದರು.

ವರದಿ :ಹಣಮಂತ ಚ. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!