ಕಲ್ಬುರ್ಗಿ : ಕಬ್ಬು ಬೆಳೆಗಾರ ಸಂಘದ ವತಿಯಿಂದ ಜಿಲ್ಲೆಯ ರೈತರ ಕುಂದು ಕೊರತೆಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಯಿತು ಮತ್ತು ಸಕ್ಕರೆ ಕಾರ್ಖಾನೆಗಳು ಪ್ರಾರಂಭಕ್ಕೂ ಮುಂಚಿತವಾಗಿ ಮುಂದೆ ಕಬ್ಬು ಬೆಳೆಗಾರರಿಗೆ ಯಾವುದೇ ಸಮಸ್ಯೆ ಆಗದಂತೆ, ಕಬ್ಬಿಗೆ ಎಫ್ ಆರ್ ಪಿ ಕಿಂತಲೂ ಹೆಚ್ಚುವರಿ ಬೆಲೆ ನಿಗದಿಪಡಿಸಬೇಕು ಮತ್ತು ಕಾರ್ಖಾನೆ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವುದು. ದ್ವಿಪಕ್ಷ ಒಪ್ಪಂದ ಜಾರಿಗೆ ತರುವುದು ಮತ್ತು ರೈತರ ಹಲವಾರು ಬೇಡಿಕೆಗಳ ಕುರಿತು ಸರ್ಕಾರಿ ಅಧಿಕಾರಿಗಳು ಮತ್ತು ರೈತರು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದು ಮುಂದೆ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಆಹಾರ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೆ ತಂದು ಮನವಿ ಪತ್ರ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೆ ಸಭೆ ಕರೆದು ರೈತರಿಗೆ ಮುಂದೆ ಸಮಸ್ಯೆ ಆಗದಂತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷರಾದ ರಮೇಶ್ ಹೂಗಾರ್ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಜಗದೀಶ್ ಪಾಟೀಲ್ ರಾಜಪುರ್, ಪದಾಧಿಕಾರಿಗಳಾದ ವೀರಣ್ಣ ಗಂಗಾಣಿ ರಟಕಲ್ ರೈತ ಸೇನೆ ತಾಲೂಕ ಅಧ್ಯಕ್ಷರು ಕಾಳಗಿ , ಶಿವರಾಜ್ ಪಾಟೀಲ್ ಗೋಣಿಗಿ ರೈತ ಸಂಘ ಜಿಲ್ಲಾ ಕಾರ್ಯದರ್ಶಿಗಳು, ಶರಣು ಮಾಗ ಹರಸೂರು, ಶಾಂತಿವೀರಪ್ಪ ಪಾಟೀಲ್ ದಸ್ತಾಪುರ್, ಸಂತೋಷ್ ಪಾಟೀಲ್ ಶಹಾಬಾದ್, ಇನ್ನೂ ಅನೇಕರು ಉಪಸ್ಥಿತರಿದ್ದರು.
ವರದಿ ಚಂದ್ರಶೇಖರ್ ಆರ್. ಪಾಟೀಲ್



















