
ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದ ಐತಿಹಾಸಿಕ ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಬ್ಯಾಂಕ್ ಆಫ್ ಬರೋಡ ಬುಕ್ಕಸಾಗರ ಶಾಖೆಯಿಂದ ಬ್ಯಾಂಕಿನ 118ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿನ ದೇವಸ್ಥಾನಕ್ಕೆ ಕಾಣಿಕೆ ಪೆಟ್ಟಿಗೆಯನ್ನು ದೇಣಿಗೆಯಾಗಿ ನೀಡಲಾಯಿತು ( 12 ಸಾವಿರ ಮೌಲ್ಯದ ಕಾಣಿಕೆ ಪೆಟ್ಟಿಗೆ )
ಬ್ಯಾಂಕ್ ವ್ಯವಸ್ಥಾಪಕ ಚಂದ್ರಶೇಖರ ಮಾತನಾಡಿ, ಬ್ಯಾಂಕ್ ಆಫ್ ಬರೋಡಾ ಜಗತ್ತಿನಲ್ಲಿ ಪಸರಿಸಿದ್ದು, ಇತ್ತೀಚೆಗೆ ಕರ್ನಾಟಕದ ಬುಕ್ಕಸಾಗರ ಗ್ರಾಮದಲ್ಲಿ ಶಾಖೆ ತೆರೆಯುವ ಮೂಲಕ ಈ ಭಾಗದ ರೈತರ ಹಾಗೂ ಗ್ರಾಹಕರಿಗೆ ಸಾಲ ಸೌಲಭ್ಯಗಳು ದೊರಕಲಿವೆ. ಇಲ್ಲಿನ ಜನಸ್ನೇಹಿಯಾಗಿ ಕೆಲಸ ಮಾಡಲಾಗುತ್ತಿದೆ. ಹೆಚ್ಚಿನ ಮಟ್ಟದಲ್ಲಿ ಜನರು ಬ್ಯಾಂಕಿನ ವ್ಯವಹಾರ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಅರ್ಚಕ ವಿಶ್ವನಾಥಸ್ವಾಮಿ, ಗ್ರಾ. ಪಂ ಸದಸ್ಯ ಶಶಿಧರ್, ಬ್ಯಾಂಕ್ ಸಿಬ್ಬಂದಿಗಳಾದ ವಿನೋದ, ಹುಲುಗಪ್ಪ, ಪ್ರಹ್ಲಾದ್ ವಿರೇಶ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ



















