ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು : ಮಂಜುನಾಯಕ

ಬಳ್ಳಾರಿ/ ಕಂಪ್ಲಿ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮಗಳಿಂದ ಆಚರಣೆ ಮಾಡಲಾಗುವುದು ಎಂದು ರಾಷ್ಟಿಯ ಹಬ್ಬಗಳ ದಿನಾಚರಣೆ ಸಮಿತಿ ಅಧ್ಯಕ್ಷರು ಹಾಗೂ ತಹಸಿಲ್ದಾರರಾದ ಜೂಗಲ್ ಮಂಜುನಾಯಕ ತಿಳಿಸಿದರು.
ಅವರು ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಆ. 15ರಂದು ಬೆಳಿಗ್ಗೆ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಷ್ಟಿಯ ಧ್ವಜಾರೋಹಣವನ್ನು ನೆರವೇರಿಸಿ ನಂತರ ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪಿ. ಯು. ಕಾಲೇಜ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.
ಸಮಾರಂಭದಲ್ಲಿ ಶಾಸಕರಾದ ಜೆ. ಎನ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ತಹಶೀಲ್ದಾರ ಜೂಗಲ್ ಮಂಜುನಾಯಕ ರಾಷ್ಟಿಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪೊಲೀಸ್, ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕರಿಸಲಿದ್ದಾರೆ. ನಂತರ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಜರುಗಲಿದ್ದು, ಕೊನೆಯಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಸಂಸ್ಕೃತಿ ಕಾರ್ಯಕ್ರಮಗಳು ಜರುಗಲಿವೆ. ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಪಟ್ಟಣದ ಎಲ್ಲಾ ಸರ್ಕಾರಿ ಕಚೇರಿಗಳನ್ನು, ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕೆಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಅನೇಕ ಗಣ್ಯರು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಮಾತನಾಡಿ ತಾಲ್ಲೂಕಿನ ವಿವಿಧ ಗ್ರಾಮಗಳ ಸಮಾಜ ಸೇವಕರು, ಸಾಧಕರನ್ನು ಸನ್ಮಾನ ಮಾಡುವುದು ಕುರಿತಂತೆ ಅನೇಕ ಸಲಹೆ ಸೂಚನೆಗಳನ್ನು ನೀಡಿದರಲ್ಲದೆ, ತಾಲ್ಲೂಕಿನ ಸಾಧಕರಿಗೆ ಪ್ರಥಮ ಆದ್ಯತೆ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ತಾ. ಪಂ. ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ, ಗಣ್ಯರಾದ ಕೆ.ಎಂ.ಹೇಮಯ್ಯಸ್ವಾಮಿ, ಸಿ.ಎ.ಚನ್ನಪ್ಪ, ಕೊಟ್ಟೂರು ರಮೇಶ್, ಬಳೆ ಮಲ್ಲಿಕಾರ್ಜುನ, ಎಚ್.ಗುಂಡಪ್ಪ, ಹಾದಿಮನಿ ಕಾಳಿಂಗವರ್ಧನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!