ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು : ನಾಗರೆಡ್ಡಿ

ಬಳ್ಳಾರಿ/ ಕಂಪ್ಲಿ : ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದರ ಜೊತೆಗೆ ಸಾರ್ವಜನಿಕರ ಕೆಲಸಗಳನ್ನು ನಿಗಧಿತ ಸಮಯದಲ್ಲಿ ಮಾಡಿಕೊಡಬೇಕೆಂದು ಬಳ್ಳಾರಿ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ತಿಳಿಸಿದರು.

ಅವರು ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ, ಅಹವಾಲು ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಅಧಿಕಾರಿಗಳು ಸಮಾಜಮುಖಿಯಾಗಿ ಸಾರ್ವಜನಿಕ ಹಿತಾಶಕ್ತಿಗಾಗಿ ಪ್ರಮಾಣಿಕತೆಯಿಂದ ಕೆಲಸ ಮಾಡಬೇಕು. ಸಂಘ-ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಸಹಿತ ಸಮಾಜಕ್ಕೆ ಒಳಿತಾಗುವಂತಹ ಸಮಸ್ಯೆಗಳ ಬಗ್ಗೆ,ಸಾರ್ವಜನಿಕರಿಗೆ ಒಳಿತಾಗುವಂತೆ ಸಮಸ್ಯೆಗಳ ಬಗ್ಗೆ ಲೋಕಾಯುಕ್ತಕ್ಕೆ ಅಹವಾಲು ಸಲ್ಲಿಸಬೇಕೆ ಹೊರತು ಸ್ವಹಿತಾಶಕ್ತಿಗಾಗಿ ಅರ್ಜಿಗಳನ್ನು ಸಲ್ಲಿಸಬಾರದು ಎಂದ ಅವರು ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎರಡು, ಪುರಸಭೆಯ ಒಂದು,ನೀರಾವರಿ ಇಲಾಖೆಯ ಒಂದು ಶಿಕ್ಷಣ ಇಲಾಖೆಯ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು.
ಅಹವಾಲು ಸ್ವೀಕಾರ ಸಭೆಯಲ್ಲಿ ಸುಮಾರು ಮೂರು ದಶಕಗಳ ಹಿಂದೆ ನಿವೇಶನಕ್ಕಾಗಿ 350 ರೂ. ಗಳನ್ನು ಪಾವತಿಸಿದ್ದು, ಹಣ ನೀಡಿದವರಿಗೆ ನಿವೇಶನಗಳನ್ನು ಹಂಚಿಕೆ ಮಾಡದೇ ಬೇಕಾಬಿಟ್ಟಿ ನಿವೇಶನಗಳನ್ನು ಹಂಚಿಕೆ ಮಾಡಿದ್ದು,ನಿವೇಶನಗಳನ್ನು ಹಂಚುವಂತೆ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರಗಳು, ನಡೆದಿದ್ದು, ಮನೆಗಳು ಇರುವವರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆಂದು ಆರೋಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಘಟನೆ ಜರುಗಿತು. ಐತಿಹಾಸಿಕ ಸೋಮಪ್ಪನ ಕೆರೆ ಹಸ್ತಾಂತರದ ಬಗ್ಗೆ, ಭುವನೇಶ್ವರಿ ಶಾಲೆ ಸ್ಥಳ ಅತೀಕ್ರಮದ ಬಗ್ಗೆ ಮನವಿಗಳನ್ನು ಸಲ್ಲಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ತಾ.ಪಂ. ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ, ಕಂದಾಯ,ಶಿಕ್ಷಣ, ಆರೋಗ್ಯ, ಕೃಷಿ, ಜೆಸ್ಕಾಂ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಭೂಮಾಪನಾ, ಪುರಸಭೆ, ತಾ.ಪಂ. ಸಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ, ಸಾರಿಗೆ,ವಿವಿಧ ವಿದ್ಯಾರ್ಥಿನಿಲಯಗಳ ಸಿಬ್ಬಂದಿಗಳು, ಎಪಿಎಂಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!