ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಲೈ ಮಹದೇಶ್ವರ ಪ್ರಾಧಿಕಾರದ ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಿದ ಶಾಸಕ ಎಂ. ಆರ್. ಮಂಜುನಾಥ್

ಚಾಮರಾಜನಗರ : ಹನೂರು ತಾಲೂಕಿನ ಮಲೈ ಮಹದೇಶ್ವರಬೆಟ್ಟದ ನಾಗಮಲೆ ಭವನದಲ್ಲಿ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕುಂದು ಕೊರತೆಗಳನ್ನು ಶಾಸಕ ಎಂ. ಆರ್. ಮಂಜುನಾಥ್ ಆಲಿಸಿದರು.
ನಂತರ ಮಾತನಾಡಿ ಮಲೈ ಮಹದೇಶ್ವರ ಬೆಟ್ಟವು ಪ್ರಸಿದ್ಧ ಪುಣ್ಯ ಸ್ಥಳವಾಗಿದ್ದು ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದು ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಜವಾಬ್ದಾರಿ ಒತ್ತವರು ನೋಡಿಕೊಳ್ಳಬೇಕು.

ಮಲೈ ಮಹದೇಶ್ವರ ಬೆಟ್ಟದಲ್ಲಿ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ, ಪೌರ ಕಾರ್ಮಿಕರ ಮೇಲ್ವಿಚಾರಕರು ಪ್ರತಿದಿನ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸ್ವಚ್ಚತೆ ಅಗತ್ಯ ಪೂರಕ ಕ್ರಮ ವಹಿಸುವ ಮೂಲಕ ದಿನಚರಿ ವರದಿ ಜೊತೆ ಕರ್ತವ್ಯ ಪಾಲನೆ ಮಾಡಬೇಕೆಂದು ಸೂಚಿಸಿದರು. ಅಲ್ಲದೆ ಪ್ರಾಧಿಕಾರದ ಕೊಠಡಿಗಳ ದಿನನಿತ್ಯದ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಮತ್ತು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವಂತಹ ಶೌಚಾಲಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿದ್ಯುತ್ ವೋಲ್ಟೆಜ್ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಚೆಸ್ಕಾಂ ಇಇ ರವರಿಗೆ ದೂರವಾಣಿ ಮುಖಾಂತರ ಫೋನ್ ಕರೆಮಾಡಿ ಸಮಸ್ಯೆ ಬಗೆಯರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ನಿವೇಶನ ಇಲ್ಲದ ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಖಾಯಂ ಹಾಗೂ ಹೊರಗುತ್ತಿಗೆ ನೌಕರರಿಗೆ ಅಧ್ಯತೆ ಮೇರೆಗೆ ಸ್ಥಳ ನಿಯುಕ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರಿಗೆ ಸೂಚಿಸಿದರು.
ಇದೇ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ರಘು ಉಪ ಕಾರ್ಯದರ್ಶಿ ಚಂದ್ರಶೇಖರ್ ಲೋಕೋಪಯೋಗಿ ಇಲಾಖೆ ಎಇಇ ಚಿನ್ನಣ್ಣ ಇಂಜಿನೀಯರ್ ಸಂತೋಷ್ ಕುಮಾರ್ ಸಹಾಯಕ ಅಭಿಯಂತರರು ಕಿರಿಯ ಅಭಿಯಂತರರು ಹಾಗೂ ಸ್ವಚ್ಛತಾ ವಿಭಾಗದ ಮೇಸ್ತ್ರಿಗಳು ಹಾಗೂ ನೌಕರರು ಹಾಜರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!