ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಯಾದಗಿರಿ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ’ ದಲ್ಲಿ ಪತ್ರಿಕೋದ್ಯಮದಲ್ಲಿ ಸಾಧನೆಗೈದು
ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಾದ ಹನುಮಂತು ಪಿ., ಮಲ್ಲಿಕಾರ್ಜುನ ಕಾಡಂನೋರ್, ಆನಂದ ಗೊರ್ಕಲ್ , ಬಾಲಪ್ಪ ಕುಪ್ಪಿ, ಬಸವರಾಜ ಕರೇಗಾರ, ದಯಾನಂದ ಹಿರೇಮಠ, ಖಾಜಾ ಕಲಿಮುದ್ದೀನ್ ಫರೀದಿ, ಮಹೇಶ್ ಗಣೇರ್, ಡಾ. ಮಲ್ಲಿಕಾರ್ಜುನ ಆಶನಾಳ, ಛಾಯಾಗ್ರಾಹಕ ಮಂಜುನಾಥ ಬಿರಾದರ ಸಗರ ಮತ್ತು ಪತ್ರಿಕಾ ವಿತರಕ ಸಾಹೇಬಗೌಡ ಕಲಾಲ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಕು. ಲಲಿತಾ ಅನಪೂರ್ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶ್ರೀ ಶರಣಪ್ಪ ಡಿ ಮಾನೇಗಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಪ್ಪ ಸಂಕೀನ್ ಮತ್ತು ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ



















