ಬೆಳಗಾವಿ :ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ಬೆಳಗಾವಿ ಇವರಿಂದ ಆಯೋಜಿಸಿದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದವು ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಶನಿವಾರದಂದು ಬೆಳಗಾವಿ ಗ್ರಾಮೀಣದ ಸರ್ಕಾರಿ ಪ್ರೌಢಶಾಲೆ ಮಾವಿನಕಟ್ಟಿಯ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಕು. ಲಕ್ಷ್ಮಿ ರುದ್ರಪ್ಪ ಪಾಟೀಲ ಇವಳು ರಚಿಸಿರುವ “ಅರಳುವ ಹೂ” ಕೃತಿಯನ್ನು ಸನ್ಮಾನ್ಯ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಹುಕ್ಕೇರಿ ಶ್ರೀ ಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು, ಬೆಳಗಾವಿಯ ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ಸಮ್ಮೇಳನದ ಸರ್ವಾಧ್ಯಕ್ಷರು ಶ್ರೀ ಎಸ್.ಎಂ. ಶಿರೂರ, ಪರಿಷತ್ತಿನ ರಾಜ್ಯಾಧ್ಯಕ್ಷರು ಚ. ನಂ. ಅಶೋಕ, ಜಿಲ್ಲಾಧ್ಯಕ್ಷ ಸಿದ್ದರಾಮ ನೀಲಾಜಿಗಿ, ಸಂಘಟನಾ ಕಾರ್ಯದರ್ಶಿ ಎಂ. ವ್ಯ. ಮೆಣಸಿನಕಾಯಿ, ಬಸವರಾಜ್ ಗಾರ್ಗಿ ಗಣ್ಯಮಾನ್ಯರ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.
ಹಿರಿಯ ಭಾಷಾ ಶಿಕ್ಷಕರು ಹಾಗೂ ಸಾಹಿತಿಗಳು ಡಾ. ಸುನೀಲ ಪರೀಟ ಇವರು ಆ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದಾರೆ. ಅದೇ ಕಾರ್ಯಕ್ರಮದ ಮಕ್ಕಳ ಕವಿ ಗೋಷ್ಠಿಯಲ್ಲಿ ಶಾಲೆಯ ಕು. ಅನುರಾಧಾ ಕೋಲಕಾರ ಹಾಗೂ ಕು. ಲಕ್ಷ್ಮಿ ಪಾಟೀಲ ಭಾಗವಹಿಸಿ ಕವನ ವಾಚನ ಮಾಡಿದರು.
ಈ ವಿದ್ಯಾರ್ಥಿನಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿಯವರು ಶುಭವನ್ನು ಕೋರಿದ್ದಾರೆ.
- ಕರುನಾಡ ಕಂದ



















