ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮವಾಗಿ ಅನ್ಯ ರಾಜ್ಯದ ರಸಗೊಬ್ಬರ ಮಾರಾಟ ಮಾಡುವವರಿಗೆ ಕಡಿವಾಣ ಹಾಕಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ

ಯಾದಗಿರಿ/ಗುರುಮಠಕಲ್: ತಾಲೂಕಿನ ತಹಶೀಲ್ದಾರ್ ಗಳಾದ ಶಾಂತಗೌಡ ಬಿರಾದರ ಅವರಿಗೆ ತಮ್ಮ ಕಚೇರಿ ಸಿಬ್ಬಂದಿ ಪಹಣಿ, ಇನ್ನಿತರ ಕೆಲಸದ ನಿಮಿತ್ಯ ಬಂದ ಸಾರ್ವಜನಿಕರಿಗೆ ಸರಿಯಾದ ಪ್ರತಿಕ್ರಿಯೆ ನೀಡದಿರುವ ಹಾಗೂ ಸಭೆ, ಕಾರ್ಯಕ್ರಮಗಳ ಕುರಿತು ಸರಿಯಾದ ಮಾಹಿತಿ ಸಂಘಟನೆ ಹಾಗೂ ಪತ್ರಕರ್ತರಿಗೆ ನೀಡದೆ ಶಿಷ್ಟಾಚಾರದ ಉಲ್ಲಂಘನೆ ಮಾಡಿರುವುದರ ಕುರಿತಾಗಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಿನ ಅಧ್ಯಕ್ಷ ಶರಣಬಸಪ್ಪ ಎಲ್ಹೇರಿ ತಿಳಿಸಿದರು. ಅದಕ್ಕೆ ಉತ್ತರವಾಗಿ ತಹಶೀಲ್ದಾರ್ ಅವರು ಇದು ಮತ್ತೆ ಪುನರಾವರ್ತನೆ ಆಗದಂತೆ ಸಿಬ್ಬಂದಿಗೆ ಎಚ್ಚರಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ವರ್ತಿಸಲು ಸೂಚನೆ ನೀಡಿದರು.

ರೈತರಿಗೆ ಯೂರಿಯಾ, ರಸಗೊಬ್ಬರ ಕೊರತೆ ಸೇರಿದಂತೆ ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಾಗೂ ಗ್ರಾಮೀಣ ಭಾಗದಲ್ಲಿ ತೆಲಂಗಾಣದಿಂದ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ತಂದು ಅಕ್ರಮ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮನವಿ ನೀಡಿದರು.

ಗುರುಮಠಕಲ್ ತಾಲೂಕಿನ ಗೌರವ ಅಧ್ಯಕ್ಷರಾದ ಭೀಮಶಂಕರ್ ಪಡಿಗೆ, ಮೌನೇಶ್ ಮಾದವರ್, ಶರಣು ಮೇಧಾ, ಮಹೇಶ್ ಅಳಿಗೆರಾ, ಬನ್ನು ಕಾಳಬೆಳಗುಂದಿ, ವೆಂಕಟೇಶ್ ಚಿಟಿಕೆನಪಲ್ಲಿ, ಜಗದೀಶ್ ನಸಲ್ ವಾಯಿ, ಕಾಶೀನಾಥ್ ರಾಥೋಡ್, ದೇವಾಸಿಂಗ್, ತಾಯಪ್ಪ, ವೆಂಕಟೇಶ್ ಬೋಯಿನ, ಅನಿಲ್ ಹಿಮ್ಲಾಪೂರ್ ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!