ಬಳ್ಳಾರಿ / ಕಂಪ್ಲಿ : ಪಟ್ಟಣದ 20ನೇ ವಾರ್ಡಿನ ಮಾರುತಿನಗರ (ಶಿಬಿರದಿನ್ನಿ)ಯಲ್ಲಿ ಶ್ರೀ ಬ್ರಹ್ಮದೇವರ (ಗುಡ್ಡೆಕಲ್ಲು) ಪ್ರತಿಷ್ಠಾಪನೆ ಪ್ರಯುಕ್ತ ಗುಡ್ಡೆಕಲ್ಲು ಮೂರ್ತಿ ಮತ್ತು ಕುಂಭ ಮೆರವಣಿಗೆ ಅದ್ದೂರಿಯಾಗಿ ಶ್ರದ್ದಾ – ಭಕ್ತಿಯಿಂದ ಬುಧವಾರ ನಡೆಯಿತು.
ಇಲ್ಲಿನ ಶ್ರೀ ಕಲ್ಮಠದಿಂದ ಆರಂಭಗೊಂಡ ಭವ್ಯ ಮೆರವಣಿಗೆ ಹೊಸ ಬಸ್ ನಿಲ್ದಾಣದ ಮುಖಾಂತರ ಪ್ರಮುಖ ರಸ್ತೆಗಳ ಮೂಲಕ ಮಾರುತಿನಗರದ ಶ್ರೀ ಆಂಜನೇಯ್ಯ ದೇವಸ್ಥಾನ ಬಳಿಯಲ್ಲಿ ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ಸುಮಂಗಲಿಯರ ಕುಂಭ, ಕಳಸ, ಎರಡು ಜೋಡೆತ್ತುಗಳ ಮೆರವಣಿಗೆ ಹಾಗೂ ತಾಷಾರಾಂಡೋಲ್ ಎಲ್ಲರ ಗಮನ ಸೆಳೆಯಿತು. ಮತ್ತು ಡೊಳ್ಳು ಕುಣಿತ, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಗೆ ಮೆರಗು ನೀಡಿದವು. ನಂತರ ಮೂರ್ತಿ ಪುರ ಪ್ರವೇಶದೊಂದಿಗೆ ಗಂಗೆ ಮತ್ತು ಗಣೇಶ ಪೂಜೆ ಹಾಗೂ ಜಲಾಧಿವಾಸ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕಾರ್ಯಗಳು ಶ್ರದ್ಧೆಯಿಂದ ನೆರವೇರಿದವು. ಇಲ್ಲಿನ ಮೆರವಣಿಗೆಯಲ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬುರವರು ಪಾಲ್ಗೊಂಡು, ದೇವರ ಕೃಪೆಗೆ ಪಾತ್ರರಾದರು. ತದನಂತರ ಮಾಜಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಇಲ್ಲಿನ ಪುರಸಭೆ ಸಮುದಾಯ ಭವನದಲ್ಲಿ ಅನ್ನಸಂತರ್ಪಣೆ ಜರುಗಿತು.
ವರದಿ : ಜಿಲಾನಸಾಬ್ ಬಡಿಗೇರ್



















