ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಂಚಭೂತಗಳಲ್ಲಿ ಲೀನವಾದ ಯೋಧ ಕಿರಣರಾಜ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿ ವೀರ ಯೋಧರಾದ ಕಿರಣ್ ರಾಜ್ ಕೇದಾರಿ ತೆಲಸಂಗ ಇವರು ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ಮೃತಪಟ್ಟ ಯೋಧ ಕಿರಣ್ ರಾಜ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮವಾದ ಐಗಳಿಯಲ್ಲಿ ನೆರವೇರಿತು.

ಮೃತ ಯೋಧನ ಸ್ವಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆ ಆವರಣದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು.

ಅಥಣಿ, ಯಕ್ಕಂಚಿ ,ಯಲಿಹಡಲಗಿ, ಅಡಹಳ್ಳಿ, ಕೊಹಳ್ಳಿ, ಐಗಳಿ ಮಾರ್ಗವಾಗಿ
ಅವರ ಪಾರ್ಥೀವ ಶರೀರವನ್ನು ಬೈಕ್, ಕಾರುಗಳು ಹಾಗೂ ಐಗಳಿ ಗ್ರಾಮಸ್ಥರ ವಿವಿಧ ವಾಹನಗಳ ಮೂಲಕ ಘನತೆಯುತವಾಗಿ ಬರಮಾಡಿಕೊಳ್ಳಲಾಗಿತ್ತು.

ಗ್ರಾಮದ ಎಲ್ಲಾ ಯುವಕರು, ಮಿತ್ರಮಂಡಳಿಗಳು, ಸಂಘಟನೆಗಳು, ಶಾಲಾ-ಕಾಲೇಜುಗಳು ತಮ್ಮ ವಾಹನಗಳೊಂದಿಗೆ ಈ ಶ್ರದ್ಧಾಂಜಲಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಅಗಲಿದ ಯೋಧನ ಪಾರ್ಥೀವ ಶರೀರಕ್ಕೆ ರಾಷ್ಟ್ರಧ್ವಜವನ್ನು ಹೊದಿಸಿ ಸೇನಾಧಿಕಾರಿಗಳಿಂದ ಪುಷ್ಪ ನಮನ ಸಲ್ಲಿಸಿ ಶಸ್ತ್ರಾಸ್ತ್ರಗಳಿಂದ ಐದು ಸುತ್ತು ಮದ್ದು ಗುಂಡು ಹಾರಿಸಿ ಗೌರವ ನಮನ ಸಲ್ಲಿಸಿದರು.

ನಂತರ ರಾಷ್ಟ್ರಧ್ವಜವನ್ನು ಸೇನಾಧಿಕಾರಿಗಳು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಥಣಿಯ ಮಾಜಿ ಶಾಸಕರಾದ ಮಹೇಶ್ ಕುಮಟಳ್ಳಿ, ಅಥಣಿಯ ಮಾಜಿ ಶಾಸಕರಾದ ಶಹಜಾನ್ ಡೊಂಗರಗಾವ, ಕಾಂಗ್ರೆಸ್ಸಿನ ಮುಖಂಡರಾದ ಗಜಾನನ ಮಂಗಸೂಳಿ ಉಪಸ್ಥಿತರಿದ್ದರು.

ವರದಿಗಾರ. ವಿಠ್ಠಲ ಖೋಕಾಟೆ ಕರುನಾಡ ಕಂದ ಅಥಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!