ಬಳ್ಳಾರಿ / ಕಂಪ್ಲಿ : ಆಲದ ಮರವನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಸಂಕೇತವೆಂದು ನಂಬಲಾಗುತ್ತದೆ. ಈ ಮರದ ಪೂಜೆಯಿಂದ ಸಂತಾನ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.
ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ 19ನೇ ವಾರ್ಡಿನ ಯಲ್ಲಮ್ಮ ಗುಡಿಯ ಹತ್ತಿರ ಇರುವ ಆಲದ ಮರದ ನಾಗಪ್ಪರಿಗೆ ಶ್ರದ್ಧಾ ಭಕ್ತಿಯಿಂದ ಪೂಜೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಭಕ್ತಾದಿಗಳು ಭಾಗವಹಿಸಿ ಪ್ರಸಾದ ಸ್ವೀಕರಿಸಿ ಪುನೀತರಾದರು.
ವರದಿ : ಜಿಲಾನಸಾಬ್ ಬಡಿಗೇರ್



















